7:00 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಅಲೋಪತಿ ಮತ್ತು ಆಯುವೇ೯ದಿಕ್ ಚಿಕಿತ್ಸೆಯ ಏಕೀಕೃತ ಆರೋಗ್ಯ ವ್ಯವಸ್ಥೆ ಜಾರಿಗೆ ರಾಜ್ಯ ಸರಕಾರ ನಿರ್ಧಾರ

17/02/2025, 21:00

ಮಂಗಳೂರು(reporterkarnataka.com):;ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಅಲೋಪತಿ ಮತ್ತು ಆಯುವೇ೯ದಿಕ್ ಚಿಕಿತ್ಸೆಯನ್ನು ಒಂದೇ ಸೂರಿನಡಿ ಒದಗಿಸುವ ಏಕೀಕೃತ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯ ಸರಕಾರ ನಿಧ೯ರಿಸಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


ಅವರು ಸೋಮವಾರ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಜೋಕಟ್ಟೆಯಲ್ಲಿ ಸರಕಾರಿ ಆಯುರ್ವೇದ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಇದುವರೆಗೆ ಪ್ರತ್ಯೇಕವಾಗಿ ಅಲೋಪತಿ ಮತ್ತು ಆಯುಷ್ ಆಸ್ಪತ್ರೆಗಳು ಕಾರ್ಯಾಚರಿಸುತ್ತಿದ್ದವು. ಸಾರ್ವಜನಿಕರಿಗೆ ಈ ಎರಡೂ ವೈದ್ಯಕೀಯ ಸೇವೆಗಳು ಒಂದೇ ಕಡೆ ಲಭ್ಯವಾಗಲು ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಕೆಲವು ಹಾಸಿಗೆಗಳನ್ನು ಆಯುಷ್ ಸೇವೆಗಳಿಗೆ ಕಾದಿರಿಸಲು ಚಿಂತಿಸಲಾಗಿದೆ ಎಂದು ಸಚಿವರು ಹೇಳಿದರು.
ಜೋಕಟ್ಟೆ ಆಯುರ್ವೇದಿಕ್ ಆಸ್ಪತ್ರೆಗೆ 2 ವೈದ್ಯರು ಮತ್ತು 6 ಅರೆ ವೈದ್ಯಕೀಯ ಸಿಬ್ಬಂದಿ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಈ ಆಸ್ಪತ್ರೆಯ ಸೇವೆಯನ್ನು ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರು ಪಡೆಯಬೇಕು ಎಂದು ಸಚಿವರು ತಿಳಿಸಿದರು.
ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಮುಡಾ ಅಧ್ಯಕ್ಷ ಸದಾಶಿವ, ಜೋಕಟ್ಟೆ ಗ್ರಾಪಂ ಅಧ್ಯಕ್ಷ ಉಮರ್ ಫಾರೂಕ್, ಮಹಾನಗರಪಾಲಿಕೆ ಸದಸ್ಯರಾದ ಅನಿಲ್ ಕುಮಾರ್, ಎ. ಸಿ. ವಿನಯರಾಜ್, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಜಿಲ್ಲಾ ಆಯಷ್ ಅಧಿಕಾರಿ ಡಾ. ಮುಹಮದ್ ಇಕ್ಬಾಲ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು