3:56 AM Friday8 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ…

ಇತ್ತೀಚಿನ ಸುದ್ದಿ

ಕೋಲಾರ ಪತ್ರಕರ್ತರ ಸಂಘದ ಕಲ್ಯಾಣ ನಿಧಿಗೆ ಮುಖ್ಯಮಂತ್ರಿಗಳಿಂದ 25 ಲಕ್ಷ ರೂ ಬಿಡುಗಡೆ

18/02/2025, 12:06

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷ ರೂ. ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ.
2022 ಫೆಬ್ರವರಿ 17 ರಂದು ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯ ಪದಾಧಿಕಾರಿಗಳ ತಂಡವು ಆಯ್ಕೆಯಾಗಿದ್ದ ಸಂದರ್ಭದಲ್ಲಿ ಪತ್ರಕರ್ತರ ಆಪತ್ಕಾಲೀನ ಸಂದರ್ಭದಲ್ಲಿ ಆಪದ್ಧನವಾಗಿ ಒಂದು ಕೋಟಿ ರೂ ಕಲ್ಯಾಣನಿಧಿಯನ್ನು ಸ್ಥಾಪನೆ ಮಾಡುವುದಾಗಿ ಘೋಷಿಸಿದರು.
ಇದಕ್ಕೆ ಪೂರಕವಾಗಿ 2022ರ ಜುಲೈ 1 ರಂದು ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಸಂಘದ ಮನವಿ ಮೇರೆಗೆ ಕಲ್ಯಾಣನಿಧಿಗೆ ಮುಖ್ಯಮಂತ್ರಿಗಳಿಂದ ಅನುದಾನ ದೊರಕಿಸುವ ಭರವಸೆ ನೀಡಿದ್ದರು.
ತಾವು ನೀಡಿದ್ದ ವಾಗ್ದಾನದಂತೆ ಕೆ.ವಿ.ಪ್ರಭಾಕರ್ ಅವರು ಮಾಡಿದ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕಲ್ಯಾಣನಿಧಿಗೆ 25 ಲಕ್ಷರೂ ಮಂಜೂರು ಮಾಡಿದ್ದರು. ಇದೀಗ
ಅನುದಾನದ ಹಣ 25 ಲಕ್ಷರೂ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ.
ಇದುವರೆಗೂ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತನ್ನ ಸ್ವಂತ ಸಂಪನ್ಮೂಲ ಹಾಗೂ ಪತ್ರಕರ್ತರಾದ ಕೋಲಾರದ ಪಾ.ಶ್ರೀ.ಅನಂತರಾಮ್, ಮಾಲೂರಿನ ಎಸ್.ವಿ.ಲೋಕೇಶ್, ಬಂಗಾರಪೇಟೆಯ ಎಸ್.ಪಿ.ವೆಂಕಟೇಶ್, ಉದ್ಯಮಿ ಅಬ್ದುಲ್ ಸುಬಾನ್ ಮತ್ತು ಕೋಲಾರ ಪತ್ರಕರ್ತರ ಕ್ರೀಡಾತಂಡದ ದೇಣಿಗೆಯನ್ನು ಒಟ್ಟುಗೂಡಿಸಿ ಇದುವರೆಗೂ 5 ಲಕ್ಷರೂ, ನಿಧಿ ಸಂಗ್ರಹಿಸಿದೆ.
ಅದರೊಂದಿಗೆ ಇದೀಗ ಮುಖ್ಯಮಂತ್ರಿಗಳಿಂದ ಬಿಡುಗಡೆಯಾಗಿರುವ ಅನುದಾನವು ಸೇರಿ ಕಲ್ಯಾಣನಿಧಿಯ ಒಟ್ಟು ಮೊತ್ತ 30 ಲಕ್ಷರೂ. ಗಳಾಗಿದೆ ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ತಿಳಿಸಿದ್ದಾರೆ.
ಕೋಲಾರದ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ಉದಾರವಾಗಿ 25 ಲಕ್ಷ ರೂ. ಅನುದಾನ ಮಂಜೂರು ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಬಿ.ಕಾವೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರಿಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್ ಮತ್ತು ವಿ.ಮುನಿರಾಜು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಇದುವರೆಗೂ ಸಂಗ್ರಹವಾಗಿರುವ ಕಲ್ಯಾಣನಿಧಿಯ 30 ಲಕ್ಷ ರೂ. ಗಳನ್ನು ಬ್ಯಾಂಕಿನಲ್ಲಿ ಡಿಪಾಸಿಟ್ ಇರಿಸಿ ಅದರಿಂದ ಬರುವ ಬಡ್ಡಿಯಲ್ಲಿ ಪತ್ರಕರ್ತರ ಆಪತ್ಕಾಲೀನ ಸಂದರ್ಭದಲ್ಲಿ ನೆರವು ನೀಡಲು ಸೋಮವಾರ ನಡೆದ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.
ಕಲ್ಯಾಣ ನಿಧಿಯ ಸಭೆಯಲ್ಲಿ ಬಿ.ವಿ.ಗೋಪಿನಾಥ್, ಎಸ್.ಕೆ.ಚಂದ್ರಶೇಖರ್, ಎ.ಜಿ.ಸುರೇಶ್ ಕುಮಾರ್, ಬ್ಯಾಲಹಳ್ಳಿ ಎಂ.ಗೋವಿಂದಗೌಡ, ಕೆ.ಎಸ್.ಗಣೇಶ್, ವಿ.ಮುನಿರಾಜು ಮತ್ತು ಪಾ.ಶ್ರೀ.ಅನಂತರಾಮ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು