3:32 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

Right to Information | ಮಾಹಿತಿ ಹಕ್ಕು ಕಾಯ್ದೆಯ ಪಾವಿತ್ರ್ಯ ಮತ್ತು ಮಹತ್ವಾಕಾಂಕ್ಷೆ ಕಾಪಾಡುವ ಜವಾಬ್ದಾರಿ ಪತ್ರಕರ್ತರ ಮೇಲಿದೆ: ಕೆ.ವಿ. ಪ್ರಭಾಕರ್

19/02/2025, 20:47

ಬೆಂಗಳೂರು(reporterkarnataka.com): ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗವನ್ನು ಮತ್ತು ದುರ್ಬಲಗೊಳಿಸುವ ಪ್ರಯತ್ನವನ್ನು ತಪ್ಪಿಸಿ, ಸರ್ಕಾರದ ಸಾಮಾಜಿಕ ನ್ಯಾಯದ ಗುರಿಯನ್ನು ಈಡೇರಿಸಿ ಎಂದು ನೂತನವಾಗಿ ನೇಮಕಗೊಂಡ ಮಾಹಿತಿ ಹಕ್ಕು ಆಯುಕ್ತರಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಮಾಹಿತಿ ಆಯುಕ್ತರಾಗಿ ನೇಮಕಗೊಂಡ ಪತ್ರಕರ್ತರು ಮತ್ತು ಚಲನಚಿತ್ರ ಅಕಾಡೆಮಿ ಸದಸ್ಯರಾದ ಪತ್ರಕರ್ತರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು.
ರಾಜ್ಯ ಸರ್ಕಾರಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಮಂದಿ ಪತ್ರಕರ್ತರು ಮಾಹಿತಿ ಆಯೋಗದ ಆಯುಕ್ತರುಗಳಾಗಿದ್ದಾರೆ ಮತ್ತು ಚಲನಚಿತ್ರ ಅಕಾಡೆಮಿ ಸದಸ್ಯರುಗಳಾಗಿದ್ದಾರೆ. ನಿಮ್ಮೆಲ್ಲರ ಮೇಲೆ ಸರ್ಕಾರದ ಮತ್ತು ಸಾಮಾಜಿಕ ನ್ಯಾಯದ ಜವಾಬ್ದಾರಿಗಳಿವೆ. ಈ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತೀರಿ ಎನ್ನುವ ಭರವಸೆ ವ್ಯಕ್ತಪಡಿಸಿದರು.
2005ರಲ್ಲಿ ಜಾರಿಗೆ ಬಂದ ಈ ಮಾಹಿತಿ ಹಕ್ಕು ಕಾಯ್ದೆಗೆ
ಅಕ್ಟೋಬರ್ 12ಕ್ಕೆ ಈ ಕಾಯ್ದೆಗೆ 20 ವರ್ಷ ತುಂಬುತ್ತಿದೆ.
ರಾಜಸ್ಥಾನದ ದೇವದುಂಗ್ರಿ ಎಂಬ ಹಳ್ಳಿಯಲ್ಲಿ
ಅರುಣಾ ರಾಯ್ (ನಿವೃತ್ತ ಐಎಎಸ್ ಅಧಿಕಾರಿ), ನಿಖಿಲ್ ದವೆ ಮತ್ತಿತರ ಚಳವಳಿಗಾರರ ಮೂಲಕ 1987ರಲ್ಲಿ ಮೊಳಕೆಯೊಡೆದ ಈ ಕನಸು, ಚಳವಳಿ ರೂಪ ಪಡೆದು ಕಾಯ್ದೆಯಾಗಿ ಅನುಷ್ಠಾನಕ್ಕೆ ಬರಲು 2005ರ ತನಕ ಕಾಯಬೇಕಾಯಿತು ಎಂದರು.
ಕೇಂದ್ರದಲ್ಲಿದ್ದ UPA -1 ಕಾಂಗ್ರೆಸ್ ಸರಕಾರದಲ್ಲಿ
ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿಯವರ ಒಟ್ಟು ಇಚ್ಚಾಶಕ್ತಿಯ ಫಲವಾಗಿ ಕಾಯ್ದೆ ಜಾರಿಗೆ ಬಂದಿದೆ.
18 ವರ್ಷಗಳ‌ ಸುದೀರ್ಘ ಹೋರಾಟದ ಬಳಿಕ‌ ಕಾಯ್ದೆ ಜಾರಿ ಆಗಿ 20 ವರ್ಷಗಳಲ್ಲಿ ಈ ಕಾಯ್ದೆಯನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ ಎನ್ನುವ ಅಸಮಾಧಾನ ವ್ಯಕ್ತ ಆಗುತ್ತಿದೆ.
ಇತ್ತೀಚಿಗೆ ಸುಪ್ರೀಂಕೋರ್ಟ್ ಕೂಡ ಇದೇ ಅಸಮಾಧಾನವನ್ನು ಹೊರ ಹಾಕಿದೆ.
ಮಾಹಿತಿ ಹಕ್ಕು, ಸಂವಿಧಾನದ 19(1)(ಎ) ವಿಧಿಯನ್ವಯ ಮೂಲಭೂತವಾದ ಹಕ್ಕು ಎಂದು ನ್ಯಾಯಾಂಗವು ಹಲವು ಬಾರಿ ಹೇಳಿದೆ. ಇದಕ್ಕೆ ಪೂರಕವಾಗಿ ಆಯುಕ್ತರು ಕಾರ್ಯಪ್ರವೃತ್ತರಾಗಬೇಕು ಎಂದು ಆಶಿಸಿದರು.
ಇದರ ಜೊತೆಗೆ ಕಾಯ್ದೆಯನ್ನು ವ್ಯಾಪಕವಾಗಿ ದುರುಪಯೋಗ ಪಡಿಸಿಕೊಳ್ಳುವವರ, ಬ್ಲಾಕ್ ಲೀಸ್ಟ್ ಗೆ ಸೇರುವ ಮಾಹಿತಿ ಹಕ್ಕು ಕಾರ್ಯಕರ್ತರ ಸಂಖ್ಯೆಯೂ ಹೆಚ್ಚುತ್ತಲೇ ಇದೆ.
ಮತ್ತೊಂದು ಕಡೆ RTI ಕಾರ್ಯಕರ್ತರ ಕೊಲೆ ಪ್ರಕರಣಗಳೂ ಮೇಲಿಂದ ಮೇಲೆ ವರದಿ ಆಗುತ್ತಲೇ ಇವೆ. ವಿಳಂಬಿತ ನ್ಯಾಯವೂ ನ್ಯಾಯದ ನಿರಾಕರಣೆಯೇ ಎನ್ನುತ್ತದೆ ನ್ಯಾಯಶಾಸ್ತ್ರ. ಪರಿಣಾಮಕಾರಿಯಾದ ಕಾನೂನೊಂದರ ಸುಗಮ ಅನುಷ್ಠಾನಕ್ಕೆ ಹಿಂಬಾಗಿಲ ಅಡ್ಡಿಗಳನ್ನು ಒಡ್ಡುವ ಮೂಲಕ, ಆ ಕಾನೂನನ್ನು ಕೆಲಸಕ್ಕೆ ಬಾರದಂತೆ ಮಾಡುವ ಪ್ರಯತ್ನಗಳೂ ನಡೆಯುತ್ತಿವೆ. ಈ ಸವಾಲುಗಳನ್ನೂ ನೂತನ ಆಯುಕ್ತರಾದ ಪತ್ರಕರ್ತರು ನಿರ್ವಹಿರಿಸಬೇಕು ಎಂದು ಕರೆ ನೀಡಿದರು.
ಮಾಹಿತಿ ಆಯುಕ್ತರಾಗಿ ನೇಮಕಗೊಂಡಿರುವ ನನ್ನ ಎಲ್ಲಾ ಸ್ನೇಹಿತರೂ ತಮ್ಮ ಪಾಲಿಗೆ ಒದಗಿ ಬಂದಿರುವ ಈ ಅವಕಾಶದಲ್ಲಿ ಕಾಯ್ದೆಯ ಗುರಿ ಮತ್ತು ಉದ್ದೇಶಗಳನ್ನು ರಕ್ಷಿಸುತ್ತಾರೆ ಎನ್ನುವ ಭರವಸೆ ನನಗಿದೆ.
2013-18 ರ ವರೆಗೆ ಭ್ರಷ್ಟಾಚಾರ ರಹಿತ ಆಡಳಿತದ ಮಾದರಿ ಮುಖ್ಯಮಂತ್ರಿ. ಮಾದರಿ ಸರ್ಕಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಬಹಳ ನಿರೀಕ್ಷೆಗಳ ಜೊತೆಗೆ ನಿಮ್ಮನ್ನು ನೇಮಕ ಮಾಡಿದೆ. ಅವರ ನಿರೀಕ್ಷೆ ಸುಳ್ಳಾಗದ ರೀತಿಯಲ್ಲಿ ನಿಮ್ಮಗಳ ಕಾರ್ಯಕ್ಷಮತೆ ಮೆಚ್ಚುಗೆಗೆ ಪಾತ್ರವಾಗಲಿ ಎಂದು ಆಶಿಸಿದರು.
ನೂತನ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ, ಬದ್ರುದ್ದೀನ್, ಮಮತಾಗೌಡ, ರಾಜಶೇಖರ್, ಮಮತಾಗೌಡ ಚಲನಚಿತ್ರ ಅಕಾಡೆಮಿ ಸದಸ್ಯರಾದ ದೇಶಾದ್ರಿ ಹೊಸ್ಮನೆ, ಚಿದಾನಂದ ಪಾಟೀಲ್ ಅವರು ಸನ್ಮಾನಿತರಾದರು.
ವಾರ್ತಾ ಇಲಾಖೆಯ ನಿವೃತ್ತ ಹಿರಿಯ ಜಂಟಿ ನಿರ್ದೇಶಕರಾದ ಎಚ್.ಬಿ.ದಿನೇಶ್, KUWJ ಅಧ್ಯಕ್ಷ ಶಿವಾನಂದ ತಗಡೂರು, ಖಜಾಂಚಿ ವಾಸುದೇವ ಹೊಳ್ಳ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು