11:41 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಲಿಂಗಸುಗೂರ: ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ; ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ನಾಗರತ್ನ, ಕೃಷಿ ಅಧಿಕಾರಿ ಸಿದ್ದಪ್ಪ ಸಸ್ಪೆಂಡ್

20/02/2025, 15:54

ಶಿವು ರಾಠೋಡ ಹುಣಸಗಿ ರಾಯಚೂರು

info.reporterkarnataka@gmail.com

ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ ಆರೋಪದ
ಹಿನ್ನೆಲೆಯಲ್ಲಿ ಲಿಂಗಸುಗೂರ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಎ.ಡಿ. ನಾಗರತ್ನ ಎಚ್. ಹುಲಕೋಟಿ ಹಾಗೂ ಕೃಷಿ ಅಧಿಕಾರಿ ಸಿದ್ದಪ್ಪ ಬಾಚಿಹಾಳ ಅವರನ್ನು ರಾಯಚೂರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಿಫಾರಸ್ಸು ಮೇರೆಗೆ ಕರ್ನಾಟಕ ಸರಕಾರದ ಕೃಷಿ ಇಲಾಖೆ ಕಾರ್ಯದರ್ಶಿಗಳು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಲಿಂಗಸುಗೂರ ತಾಲೂಕಿನ ಆನೆಹೋಸೂರ ಹಾಗೂ ಇತರೆ ಗ್ರಾಮ ಪಂಚಾಯತಿಯಲ್ಲಿ 2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಇಲಾಖೆಯ ಮುಖೇನ ಅನುಷ್ಠಾನಗೊಂಡ ಕಾಮಗಾರಿಗಳಿಲ್ಲಿ 2,75,7307 ಕೋಟಿ ರೂ‌ ಗಳ ಅವ್ಯವಹಾರಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರಗಿಸಲು ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಲಿಂಗಸುಗೂರ ಅವರು ಕೋರಿದ ಹಿನ್ನಲೆಯಲ್ಲಿ ರಾಯಚೂರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದ ವಿವಿಧ ಇಲಾಖೆ 7 ತನಿಖಾ ಅಧಿಕಾರಿಗಳ ತಂಡ ವರದಿ ಹಿನ್ನಲೆಯಲ್ಲಿ ಉದ್ಯೋಗ ಖಾತ್ರಿ ಬದು ನಿರ್ಮಾಣ ಕಾಮಗಾರಿ ಅವ್ಯವಹಾರ ಅನುದಾನ ದುರ್ಬಳಕೆಗೆ ಕಾರಣವಾಗಿದೆ. ಎ.ಡಿ. ನಾಗರತ್ನ ಹಾಗೂ ಕೃಷಿ ಅಧಿಕಾರಿ ಸಿದ್ದಪ್ಪ ವಿರುದ್ಧ ರಾಯಚೂರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸರಕಾರದ ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಶಿಸ್ತು ಕ್ರಮಕ್ಕೆ ವರದಿ ಸಲ್ಲಿಸಿದ್ದಾರೆ. ಅದರಂತೆ ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ ದೃಢಪಟ್ಟಿದ್ದು,
ಕೃಷಿ ಇಲಾಖೆ ಆಯುಕ್ತರು ಕೃಷಿ ಸಹಾಯಕ ನಿರ್ದೇಶಕಿ ನಾಗರತ್ನ ಹಾಗೂ ಕೃಷಿ ಅಧಿಕಾರಿ ಸಿದ್ದಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಿರುವರು. ರಾಯಚೂರು ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಪುರ ಕೃಷಿ ಆಯುಕ್ತರಿಗೆ ಪತ್ರ ಬರೆದು ಲಿಂಗಸುಗೂರಿನ ಕೃಷಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು