12:30 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಕುರಿತು ಪರಿಶೀಲನೆ

20/02/2025, 16:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಪೇಪರ್ ಬಳಸುತ್ತಿರುವ ಕುರಿತು ಹೆಚ್.ಡಿ.ಕೋಟೆ ಪಟ್ಟಣದ ಹೋಟೆಲ್ ಗಳಿಗೆ ಮತ್ತು ಬೀದಿ ಬದಿ ವ್ಯಾಪಾರಿ ಗಳ ಮಳಿಗೆ ಗಳಿಗೆ ತಾಲ್ಲೂಕು ಆಹಾರ ಸುರಕ್ಷತಾ ಅಧಿಕಾರಿ ಗಳಾದ ಡಾ.ರವಿಕುಮಾರ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಸುರೇಶ್ ಅವರು ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ತಾಲ್ಲೂಕು ಆಹಾರ ಸುರಕ್ಷತಾಧಿಕಾರಿಗಳು ಮಾತನಾಡಿ
ರಾಜ್ಯಾದ್ಯಂತ‌ ಪ್ಲಾಸ್ಟಿಕ್ ಗಳನ್ನು ನಿಷೇಧ ಮಾಡಲಾಗಿದೆ. ಯಾವುದೇ ಆಹಾರ ಪದಾರ್ಥಗಳಿಗೆ ಆಹಾರ ತಯಾರಿಸಲು ಹಾಗೂ ಆಹಾರವನ್ನು, ಪಾರ್ಸೆಲ್ ಕಟ್ಟಿಕೊಡಲು ಪ್ಲಾಸ್ಟಿಕ್ ಗಳನ್ನು ಬಳಸುವಂತಿಲ್ಲ,ಎಲ್ಲ ಹೋಟೆಲ್, ಕ್ಯಾಂಟೀನ್ ಮತ್ತು ಬೀದಿಬದಿ ವ್ಯಾಪಾರಿಗಳು,ಸಾರ್ವಜನಿಕರಿಗೆ ಶುದ್ಧವಾದ ಆಹಾರವನ್ನು ನೀಡಬೇಕು,ಆಹಾರವನ್ನು ತಯಾರಿಸಿದ ನಂತರ ಮುಚ್ಚಿಡಬೇಕು ಹಾಗೂ ಅಡುಗೆ ಮನೆಯನ್ನು ಸ್ವಚ್ಛತೆಯಾಗಿ ಇಟ್ಟುಕೊಳ್ಳಬೇಕು, ಬೇಸಿಗೆ ಕಾಲ ವಾದರಿಂದ ಜನರಿಗೆ ಕುಡಿಯಲು ಕಡ್ಡಾಯವಾಗಿ ಬಿಸಿ. ನೀರನ್ನು ನೀಡಬೇಕು, ಎಂದು ತಿಳಿಸಿದರು.


ನಂತರ ಹೋಟೆಲ್ ಗಳಿಂದ ಆಹಾರ ಪದಾರ್ಥಗಳನ್ನು (ಇಡ್ಲಿ ,ಚಟ್ನಿ, ಸಾಂಬಾರ್) ತೆಗೆದುಕೊಂಡು ಜಿಲ್ಲಾ ಮಟ್ಟದ ಪ್ರಯೋಗಾಲಯಕ್ಕೆ ಪರೀಕ್ಷೆ ಗೆ ಒಳಪಡಿಸಲಾಯಿತು.ಇದೇ ಸಂದರ್ಭದಲ್ಲಿ ಹೋಟೆಲ್ ಮತ್ತು ಕ್ಯಾಂಟೀನ್ ,ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ನೀಡಿ ದಂಡ ಸಹ ವಿಧಿಸಲಾಯಿತು.
ಆರೋಗ್ಯ ಇಲಾಖೆ ಹಾಗೂ ಪುರಸಭೆ, ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು