10:34 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

Lokayukta | ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ನಿರೀಕ್ಷಿತ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

20/02/2025, 21:20

ಹುಬ್ಬಳ್ಳಿ(reporterkarnataka.com): ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನಿರೀಕ್ಷಿತ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಹಗರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿದಾಗಲೇ ಇದನ್ನು ಹೇಳಿದ್ದೆವು ಎಂದರು.
ಲೋಕಾಯುಕ್ತ ನ್ಯಾಯಾಧೀಶರ ಮೇಲೆ ನಮಗೆ ವಿಶ್ವಾಸ, ಗೌರವವಿದೆ. ಆದರೆ, ಲೋಕಾಯುಕ್ತದಲ್ಲಿ ಹೆಚ್ಚುವರಿ ಎಸ್ಪಿ, ಡಿವೈಎಸ್ಪಿ ಹಂತದ ಅಧಿಕಾರಿಗಳ ಪೋಸ್ಟಿಂಗ್ ಸಿಎಂ ಕೈಯಲ್ಲೇ ಇರುವುದು. ಹಾಗಾಗಿ ತಮ್ಮ ತನಿಖೆಗೆ ಅನುಕೂಲ ಆಗುವವರನ್ನು ನಿಯೋಜಿಸಿಕೊಂಡಿದ್ದಾರೆ ಎಂದು ಸಚಿವ ಜೋಶಿ ಗಂಭೀರ ಆರೋಪ ಮಾಡಿದರು.
ಲೋಕಾಯುಕ್ತ ತನಿಖಾ ಅಧಿಕಾರಿಗಳು ಸಿಎಂಗೆ ಅನುಕೂಲ ಆದಾಗ ವಿಚಾರಣೆಗೆ ಕರೆದಿದ್ದಾರೆ. ರಾತ್ರಿ ವೇಳೆ ಅಧಿಕಾರಿಗಳು ಭೇಟಿ ಆಗಿದ್ದಾರೆ ಎಂದರು.
*ಶುದ್ಧರು ಅನ್ನೋದಾದ್ರೆ ಸಿಬಿಐಗೆ ವಹಿಸಲಿ:* ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅಷ್ಟೊಂದು ಶುದ್ಧ ಹಸ್ತರು ಎಂದಾದರೆ ಸಿಬಿಐ ತನಿಖೆಗೇ ವಹಿಸಲಿ ಎಂದು ಒತ್ತಾಯಿಸಿದ ಜೋಶಿ ಹಿಂದೂ ಇದನ್ನೇ ಹೇಳಿದ್ದೇವೆ. ಆದರೆ, ಸಿಎಂ ಅದನ್ನು ಮಾಡುತ್ತಿಲ್ಲ ಎಂದು ದೂರಿದರು.
ಮುಡಾ ಹಗರಣದಲ್ಲಿ ಪಾರದರ್ಶಕ, ನಿಷ್ಪಕ್ಷಪಾತ ತನಿಖೆ ನಡೆಯಬೇಕಾದರೆ ಸಿಬಿಐ ತನಿಖೆಯೇ ಸೂಕ್ತ. ಸಿದ್ದರಾಮಯ್ಯ ಅವರಿಗೆ ಸಿಬಿಐ ಮೇಲೆ ನಂಬಿಕೆ ಇಲ್ಲದಿದ್ದರೆ ಹೈಕೋರ್ಟ್ ಮಾನಿಟರಿಂಗ್ ಮೂಲಕ ತನಿಖೆಯಾಗಲಿ ಎಂದು ಸಚಿವ ಜೋಶಿ ಹೇಳಿದರು.
*ಪ್ರಯಾಗರಾಜ್ ಮಾಲಿನ್ಯ ಶುದ್ಧವಿದೆ:* ಮಹಾಕುಂಭ ಜರುಗುತ್ತಿರುವ ಪ್ರಯಾಗರಾಜ್ ಅಲ್ಲಿ ಮಾಲಿನ್ಯ ಶುಭ್ರವಾಗೇ ಇದೆ. ನಾನು ಕೂಡ ಶ್ರೀಸಾಮಾನ್ಯ ಜನರ ಮಧ್ಯೆಯೇ ತೀರ್ಥಸ್ನಾನ ಮಾಡಿ ಬಂದಿದ್ದೇನೆ. ಅಷ್ಟೊಂದು ವಿಶಾಲ ಮೇಳದಲ್ಲಿ ಎಲ್ಲೋ ಒಂದು ಕಡೆ ಸ್ವಲ್ಪ ವ್ಯತ್ಯಾಸವಾಗಿದ್ದರೆ ಯೋಗಿ ಆದಿತ್ಯನಾಥ್ ಅವರು ಕ್ರಮ ಕೈಗೊಳ್ಳುವುದಾಗಿ ವಿಧಾನಸಭೆಯಲ್ಲಿ ಉತ್ತರಿಸಿದ್ದಾರೆ ಎಂದು ಜೋಶಿ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು