1:58 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕತಾರ್ ನ “ತುಳು ಜಾತ್ರೆ” ಯಲ್ಲಿ ಮಿಂಚಿದ ಬಿಲ್ಲವಾಸ್ ಕತಾರ್ ನ “ಅಮ್ಮನ ತಮ್ಮನ” ತಂಡ

20/02/2025, 21:33

ದೋಹಾ(reporterkarnataka.com): ‘ತುಳು ಕೂಟ ಕತಾರ್’ ಆಶ್ರಯದಲ್ಲಿ “ತುಳು ಜಾತ್ರೆ” “ಐಡಿಯಲ್ ಇಂಡಿಯನ್ ಸ್ಕೂಲ್”, ಕತಾರ್ ನ ರಂಗವೇದಿಕೆಯಲ್ಲಿ ಅದ್ದೂರಿಯಾಗಿ ನಡೆಯಿತು. ತುಳುವರ ಪಾರಂಪರಿಕ ಪರಿಕಲ್ಪನೆ “ತುಳು ಜಾತ್ರೆ” ಯ ಅಂಗವಾಗಿ ನೃತ್ಯ,ಯಕ್ಷಗಾನ, ಪ್ರತಿಭಾ ಪುರಸ್ಕಾರ, ಜಾನಪದ ಆಟಗಳು ಮತ್ತು ವಿವಿಧ ತುಳು ನಾಡಿನ ತಿನಿಸುಗಳ ಪ್ರದರ್ಶನಗೊಂಡಿತು. ಸಾವಿರಗಟ್ಟಲೆ ಜನರು ಭಾಗವಹಿಸಿ ತಮ್ಮ ಊರಿನ ಜಾತ್ರೆಯ ಆನಂದವನ್ನು ಕತಾರ್ ನ ಮಣ್ಣಿನಲ್ಲಿ ಅನುಭವಿಸಿದರು.
ಬಿಲ್ಲವಾಸ್ ಕತಾರ್ ನ ಅವಿಭಾಜ್ಯ ಅಂಗವಾದ “ಅಮ್ಮನ ತಮ್ಮನ” ತಂಡದವರು ವಿಶೇಷವಾದ ಆಕರ್ಷಣೆಯೊಂದಿಗೆ ಎಲ್ಲರಿಗಿಂತ ವಿಭಿನ್ನವಾಗಿ ತಮ್ಮ ತಿನಿಸಂಗಡಿಯನ್ನು ಅಲಂಕಾರ ಮಾಡಿದ್ದು ಹಾಗೂ ವಿಶೇಷವಾಗಿ ಮನೆಯಲ್ಲಿ ಸಿದ್ದಪಡಿಸಿದ ಅಡುಗೆ ಜನರ ಮನ ತಣಿಸುವುದರೊಂದಿಗೆ ಭಾರೀ ಮನ್ನಣೆಯನ್ನು ಪಡೆಯುವಲ್ಲಿ ಸಾರ್ಥಕವಾಯಿತು.
ತುಳು ಜಾತ್ರೆಯಲ್ಲಿ ಪ್ರತೀ ಭಾರಿ ವಿಭಿನ್ನ ರೀತಿಯಲ್ಲಿ ಕಂಗೊಳಿಸುವ “ಅಮ್ಮನ ತಮ್ಮನ” ತಂಡದ ಇದು ಮೂರನೆಯ ವರ್ಷದ ಪ್ರದರ್ಶನವಾಗಿದೆ ಎನ್ನುವುದು ಉಲ್ಲೇಖನೀಯ.
ಈ ಭಾರಿಯ ರುಚಿ ರುಚಿ ಅಡುಗೆ ಮತ್ತು ತಂಡದ ಸರ್ವಾಂಗೀಣ ಪ್ರದರ್ಶನಕ್ಕೆ ಮನ ಸೋತ ತುಳು ಕೂಟ ಕತಾರ್, “ಅಮ್ಮನ ತಮ್ಮನ” ತಂಡದವರನ್ನು ಅತ್ಯುತ್ತಮ ತಂಡವೆಂದು ಘೋಷಿಸಿ ಪ್ರಶಸ್ತಿಯನ್ನಿತ್ತು ಮನ್ನಿಸಿತು. “ಅಮ್ಮನ ತಮ್ಮನ” ತಂಡದವರ ಪರಿಶ್ರಮಕ್ಕೆ ಸಂದ ಸಮಯೋಚಿತ ಗೌರವವಿದು.

ಇತ್ತೀಚಿನ ಸುದ್ದಿ

ಜಾಹೀರಾತು