4:36 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ

20/02/2025, 21:39

ಶಿವು ರಾಠೋಡ ಹುಣಸಗಿ ರಾಯಚೂರು

info.reporterkarnataka@gmail.com

ಲಿಂಗಸಗೂರು ಪಟ್ಟನದಲ್ಲಿರುವ ಇಂದಿರಾ ಕ್ಯಾಂಟೀನಲ್ಲಿ ನಿತ್ಯವು ಗುಣಮಟ್ಟದ ಆಹಾರ ನೀಡುತ್ತಿಲ್ಲ. ಕೂಡಲೇ ಗುತ್ತಿಗೆದಾರನ ಗುತ್ತಿಗೆ ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಕಟ ರಕ್ಷಣಾ ವೇದಿಕೆಯ ಅಮರೇಶ ಅವರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಪಟ್ಟಣದಲ್ಲಿರುವ ಇಂದಿರಾ ಕ್ಯಾಂಟೀನನಲ್ಲಿ ಗುಣಮಟ್ಟದ ಆಹಾರ ಹಂಚಿಕೆ ಮಾಡುವುದಿಲ್ಲ.

ಸರಿಯಾಗಿ ಬೆಂದಿರದ ಚಪಾತಿ ಹಾಗೂ ಅನ್ನ ಆಹಾರವನ್ನು ನೀಡಲಾಗುತ್ತಿದ್ದು, ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಬಡವರು ಸೇರಿದಂತೆ ಹಲವಾರು ಜನ ಇಂತಹುದ್ದೇ ಆಹಾರ ಸೇವಿಸಬೇಕಾಗಿದೆ.
ಸರಕಾರದಿಂದ ಬರುವ ಹಣದಲ್ಲಿ ಇಂದಿರಾ ಕ್ಯಾಂಟೀನ್ ನಡೆಸಲಾಗುತ್ತಿದ್ದು ರಿಯಾಯಿತಿ ದರದಲ್ಲಿ ಆಹಾರ ದೊರೆಯುತ್ತಿದೆ ಎಂದು ಬೇರೆಬೇರೆ ಕಡೆಯಿಂದ ಬರುವ ಬಡ ವಿದ್ಯಾರ್ಥಿಗಳು, ಇತರರು ಈ ಕ್ಯಾಂಟಿನ್ ಗೆ ಬರುತ್ತಾರೆ. ಆದರೆ ಇಲ್ಲಿಯ ಅಡುಗೆಯ ಸಿಬ್ಬಂದಿ ತಮ್ಮ ಮನಸೋ ಇಚ್ಚೆಯಂತೆ ಚಪಾತಿ ಮಾಡಿ ಅರೆಬರೆ ಬೆಂದಿರುವ ಊಟ ನೀಡುತ್ತಾರೆ. ಇಂತಹ ಊಟ ಸೇವಿಸಿದ ಹಲವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಅನ್ನವನ್ನು ಮುದ್ದೆಯಾಗಿ ಮಾಡಿದ್ದು ಅದರಲ್ಲಿ ಕೆಲವು ಬೆಂದಿವೆ ಕೆಲಹಾಗೆ ಇವೆ. ಅಂತಹ ಆಹಾರವನ್ನು ನೋಡಿದ ಹಲವಾರು ವಿದ್ಯಾರ್ಥಿಗಳು ಇಂತಹದ್ದು ಹೇಗೆ ತಿನ್ನಬೇಕು ಎಂದು ಪ್ರಶ್ನಿಸಿದ್ದಾರೆ.
ತಿಂದರೆ ತಿನ್ನಿ ಇಲ್ಲವಾದರೆ ಹೊಗಿ ಎಂದು ಬೆದರಿಕೆ ಹಾಕುತ್ತಿದ್ದಾರೆ. ಸಾರ್ವಜನಿಕರೊಡನೆ ವಾಗ್ವಾದಕ್ಕಿಳಿಯುವ ಬೆದರಿಕೆ ಹಾಕುವ ಇಲ್ಲಿಯ ಸಿಬ್ಬಂದಿಯ ಮೇಲೆ ಸೂಕ್ತ ಕ್ರಮ ಜರುಗಿಸಬೇಕು. ಹಾಗೂ ಗುತ್ತಿಗೆದಾರರ ಗುತ್ತಿಗೆ ರದ್ದು ಪಡಿಸಿ ಬೇರೆ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯ ಅಮರೇಶ ಉಸ್ಕಿಹಾಳ, ದೇವರಾಜ, ರವಿಚಂದ್ರ, ರಮೇಶ, ಶಿವರಾಜ ಸೇರಿದಂತೆ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು