6:19 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ: ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

20/02/2025, 23:35

ಹುಬ್ಬಳ್ಳಿ(reporterkarnataka.com): ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ ಆಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ 10 ಕೆಜಿ ಪಡಿತರ ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ತಡವಾಗಿಯಾದರೂ ಎಚ್ಚೆತ್ತುಕೊಂಡಿದೆ ಎಂದರು.
ರಾಜ್ಯ ಸರ್ಕಾರ ತನ್ನ ಪಾಲಿನ 5 ಕೆಜಿ ಅಕ್ಕಿ ಬದಲು ₹34 ಹಣ ನೀಡುತ್ತಿತ್ತು. 6 ತಿಂಗಳ ಹಿಂದೆಯೇ ಕೇಂದ್ರ ಕಡಿಮೆ ಬೆಲೆಗೆ ಹೆಚ್ಚುವರಿ ಅಕ್ಕಿ ಕೊಡಲು ಸಿದ್ಧವೆಂದು ತಿಳಿಸಿದ್ದರೂ ಖರೀದಿಗೆ ಮುಂದಾಗಿರಲಿಲ್ಲ ಎಂದರು.
ರಾಜ್ಯ ಸರ್ಕಾರ ಅಕ್ಕಿ ಕೇಳಿದಾಗ ನಮ್ಮಲ್ಲಿ ಅಕ್ಕಿ ಇರಲಿಲ್ಲ. ಹಾಗಾಗಿ ಆಗ ಬಿಜೆಪಿ ಮತ್ತು ಬಿಜೆಪಿಯೇತರ ಅಧಿಕಾರವಿದ್ದ ಎಲ್ಲಾ ಸರ್ಕಾರಗಳಿಗೂ ಹೆಚ್ಚುವರಿ ಅಕ್ಕಿಯಿಲ್ಲ ಎಂದೇ ಹೇಳಲಾಗಿತ್ತು ಎಂದರು.
ಬಳಿಕ ಕೇಂದ್ರ ಸರ್ಕಾರ, ಜೂನ್ ವೇಳೆಗೆ ಹೆಚ್ಚುವರಿ ಅಕ್ಕಿ ಪೂರೈಸಲು ಸಿದ್ಧವೆಂದು ರಾಜ್ಯ ಆಹಾರ ಇಲಾಖೆ ಸಚಿವ ಮುನಿಯಪ್ಪ ಅವರಿಗೆ ತಿಳಿಸಿದರೆ, ರಾಜ್ಯ ಸರ್ಕಾರದಲ್ಲಿ ದುಡ್ಡು ಇಲ್ಲದ ಕಾರಣ ಖರೀದಿಗೆ ಮುಂದಾಗಿರಲಿಲ್ಲ ಎಂದರು ಜೋಶಿ.
ರಾಜ್ಯಕ್ಕೆ ಬೇಕಾದಷ್ಟು ಅಕ್ಕಿ ಲಭ್ಯವಿದೆ ಎಂದು ರಾಜ್ಯ ಸರ್ಕಾರಕ್ಕೆ ಅಧಿಕೃತ ಪತ್ರ ಬರೆದು 5 ತಿಂಗಳಾದರೂ ಪ್ರತಿಕ್ರಿಯಿಸಿರಲಿಲ್ಲ. ₹ 22.50 ಕಡಿಮೆ ಬೆಲೆ ವಿಧಿಸಿದರೂ ರಾಜ್ಯ ಸರ್ಕಾರ ಮನಸ್ಸು ಮಾಡಿರಲಿಲ್ಲ ಎಂದರು.
ರಾಜ್ಯದ ಜನಕ್ಕೆ ಇತ್ತ ಹೆಚ್ಚುವರಿ 5 ಕೆಜಿ ಅಕ್ಕಿಯೂ ಇಲ್ಲ, ಬದಲಿಗೆ ಹಣವನ್ನೂ ಸರ್ಕಾರ ಜಮೆ ಮಾಡುತ್ತಿರಲಿಲ್ಲ. ವಂಚನೆ ಬಹಿರಂಗಗೊಳ್ಳುತ್ತಿದ್ದಂತೆ ಈಗ ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಗೆ ಮುಂದಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಡವಾಗಿಯಾದರೂ ಜ್ಞಾನೋದಯವಾಗಿದೆ ಎಂದು ಪ್ರಲ್ಹಾದ ಜೋಶಿ ಟಾಂಗ್ ಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು