4:00 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಹಜರತ್ ಸೈದಾನಿ ಬೀಬಿ ಮಾ ದರ್ಗಾದಲ್ಲಿ ನಾಳೆ ಗಂಧದ ಮಹೋತ್ಸವ; ಪ್ರಮುಖ ಬೀದಿಗಳಲ್ಲಿ ಮೆರವಣಿಗೆ

21/02/2025, 14:48

ಮೋಹನ್ ನಂಜನಗೂಡು ಮೈಸೂರು

info.reporterkarnata@gmail.com

ತಲತಲಾಂತರಗಳಿಂದ ಹಿಂದು ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿರುವ ಇತಿಹಾಸ ಪ್ರಸಿದ್ಧ ಬೆಳಲೆ ಗ್ರಾಮದ ಹಜರಾತ್ ಸೈದಾನಿ ಬೀಬಿ ಮಾ ದರ್ಗಾದಲ್ಲಿ ಗಂಧದ ಮಹೋತ್ಸವದ ಹಿನ್ನೆಲೆಯಲ್ಲಿ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಸಮೀಪದ ಬೆಳಲೆ ಗ್ರಾಮದ ಹಜರಾತ್ ಸೈದಾನಿ ಬಿಬಿ ಮಾ ದರ್ಗಾದಲ್ಲಿ ಇದೇ ಫೆ.22 ರಂದು ಗಂಧದ ಮಹೋತ್ಸವ ವಿಜೃಂಭಣೆಯಿಂದ ಜರುಗಲಿದೆ ಎಂದು ದರ್ಗಾದ ಗುರುಗಳಾದ ಕೆ.ಆರ್ ಹುಸೇನ್ ಧರ್ಮಿ ರೇಂಜಲಾಡಿ ತಿಳಿಸಿದ್ದಾರೆ.
ಅಂದು ಶನಿವಾರ ಸಂಜೆ ವಿವಿಧ ಧಾರ್ಮಿಕ ವಿಧಿ ವಿಧಾನ ಗಳೊಂದಿಗೆ ಜಾಮಿಯಾ ಮಸೀದಿಯಿಂದ ಸಂಜೆ 5:00 ಗಂಟೆಗೆ ಪಲ್ಲಕ್ಕಿ ಉತ್ಸವದಲ್ಲಿ ಗಂಧದ ಮಹೋತ್ಸವವು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಡುತ್ತದೆ.
ನಂತರ ದರ್ಗಾಗೆ ಹೋಗಿ ವಿಠಲಪುರದ ಗುರುಗಳಾದ ಹಜರತ್ ಸೈಯದ್ ಷಾ ಮಹಮ್ಮದ್, ಉಸ್ಮಾನ್ ಪಾಷಾ ಖಾದ್ರಿ ತಂಡದ ವತಿಯಿಂದ ಗಂಧವನ್ನು ಸಮರ್ಪಿಸಲಾಗುವುದು.
ವಿವಿಧ ಧಾರ್ಮಿಕ ಗುರುಗಳಿಂದ ಪ್ರವಚನವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಸಿದ್ಧ ಕವಾಲಿ ತಂಡದಿಂದ ನೃತ್ಯ ಪ್ರದರ್ಶನವಿದೆ ಎಂದು ಹಜರತ್ ಸೈದಾನಿ ಬೀಬಿ ಮಾ ದರ್ಗಾದ ಆಡಳಿತ ಮಂಡಳಿ ತಿಳಿಸಿದೆ.


ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಮತ್ತು ರಸೂಲ್ ಪಗವಾಲ ಪರಿಶೀಲನೆ ನಡೆಸಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಮಿಟಿಯ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು