12:25 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಹಜರತ್ ಸೈದಾನಿ ಬೀಬಿ ಮಾ ದರ್ಗಾದಲ್ಲಿ ನಾಳೆ ಗಂಧದ ಮಹೋತ್ಸವ; ಪ್ರಮುಖ ಬೀದಿಗಳಲ್ಲಿ ಮೆರವಣಿಗೆ

21/02/2025, 14:48

ಮೋಹನ್ ನಂಜನಗೂಡು ಮೈಸೂರು

info.reporterkarnata@gmail.com

ತಲತಲಾಂತರಗಳಿಂದ ಹಿಂದು ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿರುವ ಇತಿಹಾಸ ಪ್ರಸಿದ್ಧ ಬೆಳಲೆ ಗ್ರಾಮದ ಹಜರಾತ್ ಸೈದಾನಿ ಬೀಬಿ ಮಾ ದರ್ಗಾದಲ್ಲಿ ಗಂಧದ ಮಹೋತ್ಸವದ ಹಿನ್ನೆಲೆಯಲ್ಲಿ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಸಮೀಪದ ಬೆಳಲೆ ಗ್ರಾಮದ ಹಜರಾತ್ ಸೈದಾನಿ ಬಿಬಿ ಮಾ ದರ್ಗಾದಲ್ಲಿ ಇದೇ ಫೆ.22 ರಂದು ಗಂಧದ ಮಹೋತ್ಸವ ವಿಜೃಂಭಣೆಯಿಂದ ಜರುಗಲಿದೆ ಎಂದು ದರ್ಗಾದ ಗುರುಗಳಾದ ಕೆ.ಆರ್ ಹುಸೇನ್ ಧರ್ಮಿ ರೇಂಜಲಾಡಿ ತಿಳಿಸಿದ್ದಾರೆ.
ಅಂದು ಶನಿವಾರ ಸಂಜೆ ವಿವಿಧ ಧಾರ್ಮಿಕ ವಿಧಿ ವಿಧಾನ ಗಳೊಂದಿಗೆ ಜಾಮಿಯಾ ಮಸೀದಿಯಿಂದ ಸಂಜೆ 5:00 ಗಂಟೆಗೆ ಪಲ್ಲಕ್ಕಿ ಉತ್ಸವದಲ್ಲಿ ಗಂಧದ ಮಹೋತ್ಸವವು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಡುತ್ತದೆ.
ನಂತರ ದರ್ಗಾಗೆ ಹೋಗಿ ವಿಠಲಪುರದ ಗುರುಗಳಾದ ಹಜರತ್ ಸೈಯದ್ ಷಾ ಮಹಮ್ಮದ್, ಉಸ್ಮಾನ್ ಪಾಷಾ ಖಾದ್ರಿ ತಂಡದ ವತಿಯಿಂದ ಗಂಧವನ್ನು ಸಮರ್ಪಿಸಲಾಗುವುದು.
ವಿವಿಧ ಧಾರ್ಮಿಕ ಗುರುಗಳಿಂದ ಪ್ರವಚನವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಸಿದ್ಧ ಕವಾಲಿ ತಂಡದಿಂದ ನೃತ್ಯ ಪ್ರದರ್ಶನವಿದೆ ಎಂದು ಹಜರತ್ ಸೈದಾನಿ ಬೀಬಿ ಮಾ ದರ್ಗಾದ ಆಡಳಿತ ಮಂಡಳಿ ತಿಳಿಸಿದೆ.


ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಮತ್ತು ರಸೂಲ್ ಪಗವಾಲ ಪರಿಶೀಲನೆ ನಡೆಸಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಮಿಟಿಯ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು