7:21 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಬಾಳೆ ಬೆಳೆಗೆ ದೃಷ್ಟಿ ತಾಗದಂತೆ ಅರೆಬೆತ್ತಲೆ ಮಾಡಲ್ ಗಳ ಫೋಟೋ ಅಳವಡಿಸಿದ ಕಿಲಾಡಿ ಕೃಷಿಕ!: ಪಡ್ಡೆ ಹುಡ್ಗರು ಫುಲ್ ಖುಷ್!!

21/02/2025, 18:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಫಲವತ್ತಾದ ಕೃಷಿ ಭೂಮಿಯಲ್ಲಿ ಸೊಗಸಾಗಿ ಬೆಳೆದ ಬೆಳೆಗೆ ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ರಕ್ಕಸನ ಮುಖವಾಡ ಅಥವಾ ದೃಷ್ಟಿ ಬೊಂಬೆಗಳನ್ನು ಅಳವಡಿಸುವುದನ್ನು ನೋಡಿದ್ದೇವೆ. ಆದರೆ, ಇದಕ್ಕೆ ಬದಲಾಗಿ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಬಳಿ ಇರುವ ಕಕ್ಕರಹಟ್ಟಿ ಗ್ರಾಮದ ರೈತನೊಬ್ಬ ಐನಾತಿ ಐಡಿಯಾ ಹುಡುಕಿದ್ದಾನೆ.
ವಿಚಿತ್ರ ಆದರೂ ಸತ್ಯ ಎಂಬ ಮಾತಿನಂತೆ ಬೆದರು ಬೊಂಬೆಯ ಬದಲಾಗಿ ಅರೆಬೆತ್ತಲೆಯಾಗಿ ಇರುವ ಲೇಡಿ ಮಾಡೆಲ್ ಗಳ ಫೋಟೋಗಳನ್ನ ತನ್ನ ಜಮೀನಿನ ಸುತ್ತ ಅಳವಡಿಸಿ ಗ್ರಾಮಸ್ಥರು ಮತ್ತು ದಿನನಿತ್ಯ ಸಂಚರಿಸುವ ಅಕ್ಕಪಕ್ಕದ ಗ್ರಾಮಗಳ ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದ್ದಾನೆ.
ನಂಜನಗೂಡಿನಿಂದ ಮಡಹಳ್ಳಿ ಹಾಗೂ ತಗಡೂರು ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಚುಂಚನಹಳ್ಳಿ ಬಳಿ ಇರುವ ಕಕ್ಕರಹಟ್ಟಿ ರೈತ ಸೋಮೇಶ್ ಇಂತಹ ಐನಾತಿ ಐಡಿಯಾ ಹುಡುಕಿ ಚರ್ಚೆಗೆ ಗ್ರಾಸವಾಗಿರುವ ವ್ಯಕ್ತಿ.
ತನ್ನ ನಾಲ್ಕು ಎಕರೆ ಜಮೀನಿನಲ್ಲಿ ಬಾಳೆ ಬೆಳೆಯನ್ನು ಸೊಗಸಾಗಿ ಬೆಳೆದಿದ್ದಾನೆ. ಬಾಳೆ ಬೆಳೆ ಮೇಲೆ ಸಾರ್ವಜನಿಕರು ಮತ್ತು ದಾರಿಹೋಕರ ದೃಷ್ಟಿ ಬೀಳಬಾರದು ಎಂಬ ಕಾರಣಕ್ಕೆ ದೃಷ್ಟಿ ಬೊಂಬೆಗಳನ್ನ ಅಳವಡಿಸುವ ಬದಲು ಮಾಡೆಲ್ ಗಳ ಅರೆಬೆತ್ತಲೆ ಫೋಟೋಗಳನ್ನ ಅಳವಡಿಸಿದ್ದಾನೆ.


ತನ್ನ ಜಮೀನಿನ ಸುತ್ತ ಸುಮಾರು ಹತ್ತಾರು ಕಡೆ ಲೇಡಿ ಮಾಡೆಲ್ ಅರೆಬೆತ್ತಲೆ ಚಿತ್ರಗಳು ರಾರಾಜಿಸುತ್ತಿವೆ.
ದಾರಿಹೋಕರಂತೂ ಸೊಗಸಾಗಿ ಸಮೃದ್ದಿಯಾಗಿ ಬೆಳೆದ ಬಾಳೆ ಗಿಡಗಳ ಮೇಲೆ ದೃಷ್ಟಿ ಹರಿಸದೆ ಮಾಡೆಲ್ ಚಿತ್ರಗಳನ್ನಷ್ಟೇ ಕಣ್ತುಂಬಿಕೊಂಡು ಸಾಗುತ್ತಿದ್ದಾರಂತೆ.
ರೈತ ಸೋಮೇಶ್ ನ ಐನಾತಿ ಐಡಿಯಾ ಕೆಲವು ಗ್ರಾಮಸ್ಥರನ್ನ ಕೆರಳಿಸಿದ್ರೆ ಪಡ್ಡೆ ಹುಡುಗರ ನಿದ್ದೆ ಗೆಡಿಸಿರುವುದಂತೂ ನಿಜ.
ಒಟ್ಟಾರೆ ಸೋಮೇಶ್ ರವರ ಐಡಿಯಾನ ಹೊಗಳಬೇಕೋ…ತೆಗಳಬೇಕೋ…? ಎಂಬುದು ಗ್ರಾಮಸ್ಥರು ಮತ್ತು ಸಾರ್ವಜನಿಕರ ನಿರ್ಧಾರಕ್ಕೆ ಬಿಟ್ಟಿದ್ದು…!

ಇತ್ತೀಚಿನ ಸುದ್ದಿ

ಜಾಹೀರಾತು