3:13 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

Social Justice | ಕಾನೂನಿನಡಿ ಎಲ್ಲರೂ ಸಮಾನರು ಎಂಬ ಪರಿಕಲ್ಪನೆ ಹೊಂದಬೇಕು: ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ

21/02/2025, 18:27

ಬಳ್ಳಾರಿ(reporterkarnataka.com): ಕಾನೂನಿನಡಿ ಎಲ್ಲ ಮಾನವರು ಸಮಾನರು ಎಂಬ ಪರಿಕಲ್ಪನೆಯಲ್ಲಿ ನಡೆದಾಗ ಸಾಮಾಜಿಕ ನ್ಯಾಯ ದೊರೆಯುತ್ತದೆ. ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾದಲ್ಲಿ ನ್ಯಾಯಾಲಯವು ನ್ಯಾಯ ಒದಗಿಸಿಕೊಡುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರೂ ಆಗಿರುವ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ನಂ.2 ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಮಾನತೆ ಮತ್ತು ಸ್ವಾತಂತ್ರ್ಯ ಇವೆರಡು ದೇಶದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿದಾಗ ನಿಜವಾದ ಸಾಮಾಜಿಕ ಸಮಾನತೆ ದೊರೆಯುತ್ತದೆ. ಅಸಮಾನತೆಯನ್ನು ತೊಲಗಿಸಬೇಕೆಂದರೆ ಸಮಾನತೆಯ ಹಂಚಿಕೆಯನ್ನು ಕ್ರಮವಾಗಿ ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಾತಿ ನಿಂದನೆ, ಅವಮಾನ-ಅಪಮಾನಗಳಂತಹ ಕಷ್ಟ-ಕಾರ್ಪಾಣ್ಯಗಳನ್ನು ಸಹಿಸಿಕೊಂಡು ಕೇವಲ ವಿದ್ಯಾರ್ಜನೆಯಿಂದ ಬದಲಾವಣೆ ಎಂಬುದು ಅರಿತುಕೊಂಡು ಶ್ರೇಷ್ಠ ವ್ಯಕ್ತಿಯಾದರು. ಪ್ರಸ್ತುತ ಜಗತ್ತಿನಲ್ಲಿ ಬಡವ ಮತ್ತು ಶ್ರೀಮಂತ ಎಂಬ ಎರಡು ಜಾತಿ ಇವೆ. ಜ್ಞಾನಾರ್ಜನೆಯಿಂದ ಆರ್ಥಿಕವಾಗಿ ಸಬಲರಾದರೆ ಎಲ್ಲಾರೂ ನಿಮ್ಮ ಹಿಂದೆ ಬರುತ್ತಾರೆ ಎಂದು ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಯ್ಯನಗೌಡ ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ.ಬಿ.,  ಸಹಾಯಕ ನಿರ್ದೇಶಕರಾದ ಮಮತಾ, ನಿಲಯ ಪಾಲಕ ಶಿವಪ್ಪ, ಸರಳಾದೇವಿ ಕಾಲೇಜಿನ ಉಪನ್ಯಾಸಕರಾದ ಮಲ್ಲನ ಗೌಡ, ವಿಜಯ್ ಕುಮಾರ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ನಿಲಯದ ಸಿಬ್ಬಂದಿಗಳು, ಇನ್ನಿತರರು ಉಪಸ್ಥಿತರಿದ್ದರು.
ನಂತರ ಹಾಸ್ಟೆಲ್‌ನ ಗ್ರಂಥಾಲಯ, ಅಡುಗೆ ಕೋಣೆ ಹಾಗೂ ಅಲ್ಲಿನ ಸ್ವಚ್ಚತೆ ವೀಕ್ಷಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು