1:44 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

Social Justice | ಕಾನೂನಿನಡಿ ಎಲ್ಲರೂ ಸಮಾನರು ಎಂಬ ಪರಿಕಲ್ಪನೆ ಹೊಂದಬೇಕು: ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ

21/02/2025, 18:27

ಬಳ್ಳಾರಿ(reporterkarnataka.com): ಕಾನೂನಿನಡಿ ಎಲ್ಲ ಮಾನವರು ಸಮಾನರು ಎಂಬ ಪರಿಕಲ್ಪನೆಯಲ್ಲಿ ನಡೆದಾಗ ಸಾಮಾಜಿಕ ನ್ಯಾಯ ದೊರೆಯುತ್ತದೆ. ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾದಲ್ಲಿ ನ್ಯಾಯಾಲಯವು ನ್ಯಾಯ ಒದಗಿಸಿಕೊಡುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರೂ ಆಗಿರುವ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ನಂ.2 ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಮಾನತೆ ಮತ್ತು ಸ್ವಾತಂತ್ರ್ಯ ಇವೆರಡು ದೇಶದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿದಾಗ ನಿಜವಾದ ಸಾಮಾಜಿಕ ಸಮಾನತೆ ದೊರೆಯುತ್ತದೆ. ಅಸಮಾನತೆಯನ್ನು ತೊಲಗಿಸಬೇಕೆಂದರೆ ಸಮಾನತೆಯ ಹಂಚಿಕೆಯನ್ನು ಕ್ರಮವಾಗಿ ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಾತಿ ನಿಂದನೆ, ಅವಮಾನ-ಅಪಮಾನಗಳಂತಹ ಕಷ್ಟ-ಕಾರ್ಪಾಣ್ಯಗಳನ್ನು ಸಹಿಸಿಕೊಂಡು ಕೇವಲ ವಿದ್ಯಾರ್ಜನೆಯಿಂದ ಬದಲಾವಣೆ ಎಂಬುದು ಅರಿತುಕೊಂಡು ಶ್ರೇಷ್ಠ ವ್ಯಕ್ತಿಯಾದರು. ಪ್ರಸ್ತುತ ಜಗತ್ತಿನಲ್ಲಿ ಬಡವ ಮತ್ತು ಶ್ರೀಮಂತ ಎಂಬ ಎರಡು ಜಾತಿ ಇವೆ. ಜ್ಞಾನಾರ್ಜನೆಯಿಂದ ಆರ್ಥಿಕವಾಗಿ ಸಬಲರಾದರೆ ಎಲ್ಲಾರೂ ನಿಮ್ಮ ಹಿಂದೆ ಬರುತ್ತಾರೆ ಎಂದು ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಯ್ಯನಗೌಡ ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ.ಬಿ.,  ಸಹಾಯಕ ನಿರ್ದೇಶಕರಾದ ಮಮತಾ, ನಿಲಯ ಪಾಲಕ ಶಿವಪ್ಪ, ಸರಳಾದೇವಿ ಕಾಲೇಜಿನ ಉಪನ್ಯಾಸಕರಾದ ಮಲ್ಲನ ಗೌಡ, ವಿಜಯ್ ಕುಮಾರ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ನಿಲಯದ ಸಿಬ್ಬಂದಿಗಳು, ಇನ್ನಿತರರು ಉಪಸ್ಥಿತರಿದ್ದರು.
ನಂತರ ಹಾಸ್ಟೆಲ್‌ನ ಗ್ರಂಥಾಲಯ, ಅಡುಗೆ ಕೋಣೆ ಹಾಗೂ ಅಲ್ಲಿನ ಸ್ವಚ್ಚತೆ ವೀಕ್ಷಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು