10:59 PM Sunday29 - June 2025
ಬ್ರೇಕಿಂಗ್ ನ್ಯೂಸ್
Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:… ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ… ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ… BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್…

ಇತ್ತೀಚಿನ ಸುದ್ದಿ

Health | ರೋಗಿಗೆ ಆತ್ಮವಿಶ್ವಾಸವೇ ದಿವ್ಯೌಷಧ: ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಶ್ಲಾಘನೆ

21/02/2025, 21:58

ಮಂಗಳೂರು(reporterkarnataka.com): ಒಬ್ಬ ರೋಗಿಗೆ ಆತ್ಮವಿಶ್ವಾಸವೇ ದಿವ್ಯೌಷಧ. ಒಂದು ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ಭರವಸೆ ಸಿಕ್ಕಿದರೆ ಆತ ಎಲ್ಲವನ್ನೂ ಗೆದ್ದಂತೆ. ಇದಕ್ಕೆ ಉತ್ತಮ ಉದಾಹರಣೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.‌ಪೂಜಾರಿ ಹೇಳಿದರು.
ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯ ಅತ್ಯಾಧುನಿಕ ಸೌಲಭ್ಯಗಳನ್ನು ಪರಿಶೀಲಿಸಿ, ಸರ್ಕಾರಿ ಆಸ್ಪತ್ರೆಯೊಂದು ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಆರ್‌ಎಂಒ ಡಾ.ಜಗದೀಶ್ ಅವರ ಅವಿರತ ಶ್ರಮದಿಂದ ನಗರದ ಖಾಸಗಿ ಆಸ್ಪತ್ರೆಯನ್ನೂ ಮೀರಿಸುವಂತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.


ಆಸ್ಪತ್ರೆಯ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಆರ್‌ಎಂಒ ಡಾ.ಜಗದೀಶ್ ಅವರ ಕಾರ್ಯವನ್ನು ಶ್ಲಾಘಿಸಿ ಗೌರವಿಸಲಾಯಿತು.
ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಪದ್ಮನಾಭ ಅಮೀನ್, ಪ್ರಮೀಳಾ ಈಶ್ವರ್, ಶಶೀಧರ ಕೊಠಾರಿ, ಅನೀಲ್, ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯ ಸಮರ್ಥ್ ಭಟ್ ಮೊದಲಾದವರು ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು