6:16 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

Cheetah | ಅರಣ್ಯ ಇಲಾಖೆಯಲ್ಲಿ ತಕ್ಷಣಕ್ಕೆ ಲಭ್ಯವಿಲ್ಲದ ಅರಿವಳಿಕೆ ತಜ್ಞರು: ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣಬಿಟ್ಟ ಚಿರತೆ

21/02/2025, 22:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟಿದೆ.
ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ಗುರುವಾರ ರಾತ್ರಿಯೇ ಚಿರತೆ ಸಿಲುಕಿದೆ. ಶುಕ್ರವಾರ ಬೆಳಿಗ್ಗೆ ಗಮನಿಸಿದ ಸ್ಥಳೀಯರು, ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆ ರಕ್ಷಣೆಗೆ ಪ್ರಯತ್ನಿಸಿದರು. 
ಶಿವಮೊಗ್ಗದಿಂದ ಅರಿವಳಿಕೆ ತಜ್ಞರನ್ನು ಕರೆಸಿ ರಕ್ಷಣೆ ಮಾಡಲು ಮುಂದಾದರು. ಅಷ್ಟರಲ್ಲಿ ಚಿರತೆ ಉಸಿರಾಟ ನಿಲ್ಲಿಸಿದ್ದು, ಮೃತಪಟ್ಟಿದೆ ಎಂದು ಅಧಿಕಾರಿಗಳು ಘೋಷಣೆ ಮಾಡಿದರು. ಉರುಳು ಬಿಡಿಸಿಕೊಳ್ಳುವ ಪ್ರಯತ್ನದಲ್ಲಿ ಸೊಂಟಕ್ಕೆ ಇಳಿದಿದ್ದ ಉರುಳು ಮತ್ತಷ್ಟು ಬಿಗಿಯಾಗಿ ಚಿರತೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದರು.
ಕಾಡು ಹಂದಿಗೆ ಹಾಕಿರುವ ಉರುಳಿಗೆ ಚಿರತೆ ಸಿಲುಕಿರುವ ಸಾಧ್ಯತೆ ಇದೆ. ಮೊದಲಿಗೆ ಕಾಫಿ ತೋಟದ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು. ಮರಣೋತ್ತರ ಪರೀಕ್ಷೆ ಬಳಿಕ ತನಿಖೆ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು