2:26 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

Cheetah | ಅರಣ್ಯ ಇಲಾಖೆಯಲ್ಲಿ ತಕ್ಷಣಕ್ಕೆ ಲಭ್ಯವಿಲ್ಲದ ಅರಿವಳಿಕೆ ತಜ್ಞರು: ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣಬಿಟ್ಟ ಚಿರತೆ

21/02/2025, 22:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟಿದೆ.
ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ಗುರುವಾರ ರಾತ್ರಿಯೇ ಚಿರತೆ ಸಿಲುಕಿದೆ. ಶುಕ್ರವಾರ ಬೆಳಿಗ್ಗೆ ಗಮನಿಸಿದ ಸ್ಥಳೀಯರು, ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆ ರಕ್ಷಣೆಗೆ ಪ್ರಯತ್ನಿಸಿದರು. 
ಶಿವಮೊಗ್ಗದಿಂದ ಅರಿವಳಿಕೆ ತಜ್ಞರನ್ನು ಕರೆಸಿ ರಕ್ಷಣೆ ಮಾಡಲು ಮುಂದಾದರು. ಅಷ್ಟರಲ್ಲಿ ಚಿರತೆ ಉಸಿರಾಟ ನಿಲ್ಲಿಸಿದ್ದು, ಮೃತಪಟ್ಟಿದೆ ಎಂದು ಅಧಿಕಾರಿಗಳು ಘೋಷಣೆ ಮಾಡಿದರು. ಉರುಳು ಬಿಡಿಸಿಕೊಳ್ಳುವ ಪ್ರಯತ್ನದಲ್ಲಿ ಸೊಂಟಕ್ಕೆ ಇಳಿದಿದ್ದ ಉರುಳು ಮತ್ತಷ್ಟು ಬಿಗಿಯಾಗಿ ಚಿರತೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದರು.
ಕಾಡು ಹಂದಿಗೆ ಹಾಕಿರುವ ಉರುಳಿಗೆ ಚಿರತೆ ಸಿಲುಕಿರುವ ಸಾಧ್ಯತೆ ಇದೆ. ಮೊದಲಿಗೆ ಕಾಫಿ ತೋಟದ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು. ಮರಣೋತ್ತರ ಪರೀಕ್ಷೆ ಬಳಿಕ ತನಿಖೆ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು