9:19 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್ ಕೂಡ ಶಾಮೀಲು

22/02/2025, 09:58

ಶಿವು ರಾಠೋಡ ಹುಣಸಗಿ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯಲ್ಲಿನ ಕೋಟ್ಯಾಂತರ ರೂಪಾಯಿ ಲೂಟಿ ನಡೆದಿರುವುದು ಬೆಳಕಿಗೆ ಬಂದಿದೆ.
ಮುಜರಾಯಿ ದೇವಸ್ಥಾನಗಳ ಅರ್ಚಕರಿಗೆ ಸೇರಬೇಕಾದ 1,87,86,561 ರೂ. ಹಣ ಲೂಟಿಯಾಗಿದೆ. ಲಿಂಗಸುಗೂರು ಕೆನರಾ ಬ್ಯಾಂಕ್ ಸಿಬ್ಬಂದಿಯೊಂದಿಗೆ ಶಾಮೀಲಾಗಿ ಸರ್ಕಾರದ ಹಣವನ್ನು ಅಧಿಕಾರಿಗಳು ಕುಟುಂಬಸ್ಥರು ಹಾಗೂ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ, ಮುಜರಾಯಿ ಖಾತೆಯ ಹಣ ಲಪಟಾಯಿಸಿದ್ದು, ಕಚೇರಿಯ ಐವರು ಅಧಿಕಾರಿಗಳಿಂದ ಹಣ ದುರ್ಬಳಕೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಜೊತೆಗೆ ದ್ವಿತೀಯ ದರ್ಜೆ ಸಹಾಯಕನ ಮೇಲೆ ಆರೋಪ ಹೊರಿಸಿ ಕೈ ತೊಳೆದುಕೊಳ್ಳಲು ಸಂಚು ನಡೆದಿಸಿದ್ದರು ಎನ್ನಲಾಗಿದೆ. ಎಸ್‌ಡಿಎ ಯಲ್ಲಪ್ಪನಿಂದ ತನ್ನ ಪತ್ನಿ, ಮಗ, ಮಗಳು, ಟೆಕ್ಸಟೈಲ್ ಹಾಗೂ ಕಿರಾಣಿ ಅಂಗಡಿಗಳಿಗೆ ಹಣ ವರ್ಗಾವಣೆಯಾಗಿದೆ.
ಸದ್ಯ ಹಗರಣ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಲಿಂಗಸುಗೂರು ತಹಶೀಲ್ದಾರ್ ಶಂಶಾಲಂ ಅವರು ಎಸ್‌ಡಿಎ ಯಲ್ಲಪ್ಪ, ಕೆನರಾ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು