7:05 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್ ಕೂಡ ಶಾಮೀಲು

22/02/2025, 09:58

ಶಿವು ರಾಠೋಡ ಹುಣಸಗಿ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯಲ್ಲಿನ ಕೋಟ್ಯಾಂತರ ರೂಪಾಯಿ ಲೂಟಿ ನಡೆದಿರುವುದು ಬೆಳಕಿಗೆ ಬಂದಿದೆ.
ಮುಜರಾಯಿ ದೇವಸ್ಥಾನಗಳ ಅರ್ಚಕರಿಗೆ ಸೇರಬೇಕಾದ 1,87,86,561 ರೂ. ಹಣ ಲೂಟಿಯಾಗಿದೆ. ಲಿಂಗಸುಗೂರು ಕೆನರಾ ಬ್ಯಾಂಕ್ ಸಿಬ್ಬಂದಿಯೊಂದಿಗೆ ಶಾಮೀಲಾಗಿ ಸರ್ಕಾರದ ಹಣವನ್ನು ಅಧಿಕಾರಿಗಳು ಕುಟುಂಬಸ್ಥರು ಹಾಗೂ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ, ಮುಜರಾಯಿ ಖಾತೆಯ ಹಣ ಲಪಟಾಯಿಸಿದ್ದು, ಕಚೇರಿಯ ಐವರು ಅಧಿಕಾರಿಗಳಿಂದ ಹಣ ದುರ್ಬಳಕೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಜೊತೆಗೆ ದ್ವಿತೀಯ ದರ್ಜೆ ಸಹಾಯಕನ ಮೇಲೆ ಆರೋಪ ಹೊರಿಸಿ ಕೈ ತೊಳೆದುಕೊಳ್ಳಲು ಸಂಚು ನಡೆದಿಸಿದ್ದರು ಎನ್ನಲಾಗಿದೆ. ಎಸ್‌ಡಿಎ ಯಲ್ಲಪ್ಪನಿಂದ ತನ್ನ ಪತ್ನಿ, ಮಗ, ಮಗಳು, ಟೆಕ್ಸಟೈಲ್ ಹಾಗೂ ಕಿರಾಣಿ ಅಂಗಡಿಗಳಿಗೆ ಹಣ ವರ್ಗಾವಣೆಯಾಗಿದೆ.
ಸದ್ಯ ಹಗರಣ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಲಿಂಗಸುಗೂರು ತಹಶೀಲ್ದಾರ್ ಶಂಶಾಲಂ ಅವರು ಎಸ್‌ಡಿಎ ಯಲ್ಲಪ್ಪ, ಕೆನರಾ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು