7:19 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

Just Miss | ಚಿಕ್ಕಮಗಳೂರು: ಆನೆ ದಾಳಿಯಿಂದ ತಪ್ಪಿಸಿಕೊಳ್ಳಲು ಮರವೇರಿ ಪ್ರಾಣ ಉಳಿಸಿಕೊಂಡ ಇಟಿಎಫ್ ಸಿಬ್ಬಂದಿ!

22/02/2025, 10:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಆನೆ ಹಾವಾಳಿ ಮುಂದುವರೆದಿದ್ದು, ಆನೆ ದಾಳಿಯಿಂದ ಇ.ಟಿ.ಎಫ್. ( ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿಯೋರ್ವ ಮರಹತ್ತಿ ಜೀವ ಉಳಿಸಿಕೊಂಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಸಾಲೂರು ಅರಣ್ಯದಲ್ಲಿ ನಡೆದಿದೆ.


ಎನ್.ಆರ್.ಪುರ ತಾಲೂಕಿನಲ್ಲಿ ಇತ್ತಿಚೆಗೆ ಆನೆ ಹಾವಳಿ ಮಿತಿ ಮೀರಿದೆ. ಕಾಡಾನೆಗಳು ಪ್ರತಿನಿತ್ಯ ಪುಂಡಾಟ ಮೆರೆಯುತ್ತಿದ್ದು, ಮೂರು ತಿಂಗಳಲ್ಲಿ ಇಬ್ಬರು ಆನೆ ದಾಳಿಗೆ ತುತ್ತಾಗಿದ್ದಾರೆ.‌ ಶುಕ್ರವಾರ ಕೂಡ ಕಾಫಿತೋಟಕ್ಕೆ ಬಂದಿದ್ದ ಪುಂಡಾನೆಯೊಂದನ್ನ ಓಡಿಸಲು ಹೋಗಿದ್ದ ಇ.ಟಿ.ಎಫ್. ಸಿಬ್ಬಂದಿ ಮೇಲೆಯೇ ಆನೆಯೊಂದು ಅಟ್ಯಾಕ್ ಮಾಡಲು ಮುಂದಾಗಿದೆ. ಸಾಲೂರು ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಕಾಡಾನೆಯನ್ನು ಓಡಿಸುವ ವೇಳೆ ಆನೆ ಇಟಿಎಫ್ ಸಿಬ್ಬಂದಿಗಳ ಮೇಲೆ ದಾಳಿ ನಡೆಸಲು ಮುಂದಾಗಿದೆ. ತಕ್ಷಣ ಎಚ್ಚೆತ್ತ ಇಟಿಎಫ್ ಸಿಬ್ಬಂದಿಗಳು ಮರವನ್ನೇರಿ ಕುಳಿತು ಜೀವ ಉಳಿಸಿಕೊಂಡಿದ್ದಾರೆ. ಮರವೇರಿ ಕುಳಿತ ನಂತರವೂ ಕಾಡಾನೆ ಮರವನ್ನು ಅಲುಗಾಡಿಸಲು ಮುಂದಾಗಿದ್ದು, ಈ ದೃಶ್ಯವನ್ನು ಮರದ ಮೇಲೆ ಕುಳಿತುಕೊಂಡು ಆನೆ ನಿಗ್ರಹ ದಳದ ಸಿಬ್ಬಂದಿಗಳು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ದೃಶ್ಯ ನೋಡಿದವರ ಮೈ ಜುಮ್ ಎನಿಸುವಂತಿದ್ದು, ಆನೆ ದಾಳಿ ಹಾಗೂ ಹಾವಳಿಯಿಂದ ಕಂಗೆಟ್ಟಿರೋ ಜನ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು