7:21 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Just Miss | ಚಿಕ್ಕಮಗಳೂರು: ಆನೆ ದಾಳಿಯಿಂದ ತಪ್ಪಿಸಿಕೊಳ್ಳಲು ಮರವೇರಿ ಪ್ರಾಣ ಉಳಿಸಿಕೊಂಡ ಇಟಿಎಫ್ ಸಿಬ್ಬಂದಿ!

22/02/2025, 10:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಆನೆ ಹಾವಾಳಿ ಮುಂದುವರೆದಿದ್ದು, ಆನೆ ದಾಳಿಯಿಂದ ಇ.ಟಿ.ಎಫ್. ( ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿಯೋರ್ವ ಮರಹತ್ತಿ ಜೀವ ಉಳಿಸಿಕೊಂಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಸಾಲೂರು ಅರಣ್ಯದಲ್ಲಿ ನಡೆದಿದೆ.


ಎನ್.ಆರ್.ಪುರ ತಾಲೂಕಿನಲ್ಲಿ ಇತ್ತಿಚೆಗೆ ಆನೆ ಹಾವಳಿ ಮಿತಿ ಮೀರಿದೆ. ಕಾಡಾನೆಗಳು ಪ್ರತಿನಿತ್ಯ ಪುಂಡಾಟ ಮೆರೆಯುತ್ತಿದ್ದು, ಮೂರು ತಿಂಗಳಲ್ಲಿ ಇಬ್ಬರು ಆನೆ ದಾಳಿಗೆ ತುತ್ತಾಗಿದ್ದಾರೆ.‌ ಶುಕ್ರವಾರ ಕೂಡ ಕಾಫಿತೋಟಕ್ಕೆ ಬಂದಿದ್ದ ಪುಂಡಾನೆಯೊಂದನ್ನ ಓಡಿಸಲು ಹೋಗಿದ್ದ ಇ.ಟಿ.ಎಫ್. ಸಿಬ್ಬಂದಿ ಮೇಲೆಯೇ ಆನೆಯೊಂದು ಅಟ್ಯಾಕ್ ಮಾಡಲು ಮುಂದಾಗಿದೆ. ಸಾಲೂರು ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಕಾಡಾನೆಯನ್ನು ಓಡಿಸುವ ವೇಳೆ ಆನೆ ಇಟಿಎಫ್ ಸಿಬ್ಬಂದಿಗಳ ಮೇಲೆ ದಾಳಿ ನಡೆಸಲು ಮುಂದಾಗಿದೆ. ತಕ್ಷಣ ಎಚ್ಚೆತ್ತ ಇಟಿಎಫ್ ಸಿಬ್ಬಂದಿಗಳು ಮರವನ್ನೇರಿ ಕುಳಿತು ಜೀವ ಉಳಿಸಿಕೊಂಡಿದ್ದಾರೆ. ಮರವೇರಿ ಕುಳಿತ ನಂತರವೂ ಕಾಡಾನೆ ಮರವನ್ನು ಅಲುಗಾಡಿಸಲು ಮುಂದಾಗಿದ್ದು, ಈ ದೃಶ್ಯವನ್ನು ಮರದ ಮೇಲೆ ಕುಳಿತುಕೊಂಡು ಆನೆ ನಿಗ್ರಹ ದಳದ ಸಿಬ್ಬಂದಿಗಳು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ದೃಶ್ಯ ನೋಡಿದವರ ಮೈ ಜುಮ್ ಎನಿಸುವಂತಿದ್ದು, ಆನೆ ದಾಳಿ ಹಾಗೂ ಹಾವಳಿಯಿಂದ ಕಂಗೆಟ್ಟಿರೋ ಜನ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು