3:19 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ನೀರು, ಮಣ್ಣು ದೇವರು ಕೊಟ್ಟ ಕಾಣಿಕೆ ಅದು ಸಂರಕ್ಷಣೆ ಮಾಡಬೇಕು: ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮೀಜಿ

22/02/2025, 19:22

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ರೈತರು ಮಣ್ಣು,ನೀರಿನ ಸಂರಕ್ಷಣೆ ಮಾಡುವುದು ಅತಿ ಅವಶ್ಯಕವಾಗಿದ್ದು, ಮನೆಗೊಂದು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಯಲ್ಲಿ ಪ್ರತಿಯೊಬ್ಬರು ಪಾಲದಾರರಾಗಬೇಕು ಎಂದು ಅಬ್ಬೆ ತುಮಕೂರಿನ ಶ್ರೀ ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮಿಗಳಾದ ಶಿವಶೇಖರ ಸ್ವಾಮಿ ಹೇಳಿದರು
ತಾಲೂಕಿನ ಅಬ್ಬೆತುಮಕೂರ ಗ್ರಾಮದ ಶ್ರೀ ವಿಶ್ವರಾಧ್ಯ ಸಿದ್ದ ಸಂಸ್ಥಾನ ಮಠದಲ್ಲಿ ಜಿಲ್ಲಾ ಪಂಚಾಯತ್ ಯಾದಗಿರಿ, ಕೃಷಿ ಇಲಾಖೆ ಯಾದಗಿರಿ ವತಿಯಿಂದ ಪ್ರದಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ, ಜಲಾನಯನ ಯಾತ್ರೆ ಪ್ರಯುಕ್ತ ಪಾನಿ ಕೀ ಪಾಠ ಶಾಲಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೇಸಿಗೆ ಆರಂಭವಾಗಿದ್ದು, ನೀರನ್ನು ಮಿತವಾಗಿ ಬಳಸಬೇಕು. ಮಾನವ ಹಾಗೂ ಪ್ರಾಣಿ-ಪಕ್ಷಿ ಸಂಕುಲ ಆಹಾರವಿಲ್ಲದೆ ಹಲವಾರು ದಿನಗಳು ಬದುಕಬಹುದು. ಆದರೆ ಕುಡಿಯುವ ನೀರಿಲ್ಲದೆ ಒಂದು ದಿನಬದುಕುವುದೂ ಅತೀ ಕಷ್ಟ ಎಂದರು.
ಮಳೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಇದರಿಂದ ನೀರಿನ ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ ನೀರನ್ನು ಪೋಲು ಮಾಡದೆ ಎಚ್ಚರಿಕೆಯಿಂದ ಬಳಸಬೇಕು ಎಂದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಮಾತನಾಡಿ, ನೀರನ್ನು ಮಿತವಾಗಿ ಬಳಸಬೇಕು. ನೀರಿನ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ. ನಾವೆಲ್ಲರೂ ಸಂಶೋಧನೆಗಳಿಂದ ಎಷ್ಟೇ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಮುಂದುವರಿದರೂ, ನಮ್ಮಿಂದ ನೀರನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ನೀರು ದೇವರು ಕೊಟ್ಟ ಕಾಣಿಕೆ. ಅದನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕೆಂದರೆ ನೀರನ್ನು ಸಂರಕ್ಷಿಸಬೇಕು ಎಂದರು.
ಈ‌ ಸಂದರ್ಭದಲ್ಲಿ ಸಹಾಯಕ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳಾದ ಯಾಮ ರೆಡ್ಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರುಗಳಾದ ಬಸವರಾಜ ಬೊಮ್ಮನ, ಟಾಟಾ ಟ್ರಸ್ಟ್ ಕಾರ್ಯಕ್ರಮ ಸಂಯೋಜಕ ಮಂಜುನಾಥ, ಅಬ್ಬೆತುಕೂರಿನ ಪಶು ವೈದ್ಯಾಧಿಕಾರಿ ಡಾ. ಶಿವಮಂಗಲಾ, ತೋಟಗಾರಿಕೆ ವಿಸ್ತಾರಣ ಮುಂದಾಳು ರಾಜಕುಮಾರ, ಸಹಾಯಕ ಕೃಷಿ ನಿರ್ದೇಶಕರು ವಿಷಯ ತಜ್ಷರಾದ ರಾಜಕುಮಾರ, ಅಬ್ಬೆಮಕೂರಿನ ಬಿಎಡ್ ವಿದ್ಯಾರ್ಥಿಗಳು, ಹಾಗೂ ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು