8:09 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನೀರು, ಮಣ್ಣು ದೇವರು ಕೊಟ್ಟ ಕಾಣಿಕೆ ಅದು ಸಂರಕ್ಷಣೆ ಮಾಡಬೇಕು: ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮೀಜಿ

22/02/2025, 19:22

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ರೈತರು ಮಣ್ಣು,ನೀರಿನ ಸಂರಕ್ಷಣೆ ಮಾಡುವುದು ಅತಿ ಅವಶ್ಯಕವಾಗಿದ್ದು, ಮನೆಗೊಂದು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಯಲ್ಲಿ ಪ್ರತಿಯೊಬ್ಬರು ಪಾಲದಾರರಾಗಬೇಕು ಎಂದು ಅಬ್ಬೆ ತುಮಕೂರಿನ ಶ್ರೀ ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮಿಗಳಾದ ಶಿವಶೇಖರ ಸ್ವಾಮಿ ಹೇಳಿದರು
ತಾಲೂಕಿನ ಅಬ್ಬೆತುಮಕೂರ ಗ್ರಾಮದ ಶ್ರೀ ವಿಶ್ವರಾಧ್ಯ ಸಿದ್ದ ಸಂಸ್ಥಾನ ಮಠದಲ್ಲಿ ಜಿಲ್ಲಾ ಪಂಚಾಯತ್ ಯಾದಗಿರಿ, ಕೃಷಿ ಇಲಾಖೆ ಯಾದಗಿರಿ ವತಿಯಿಂದ ಪ್ರದಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ, ಜಲಾನಯನ ಯಾತ್ರೆ ಪ್ರಯುಕ್ತ ಪಾನಿ ಕೀ ಪಾಠ ಶಾಲಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೇಸಿಗೆ ಆರಂಭವಾಗಿದ್ದು, ನೀರನ್ನು ಮಿತವಾಗಿ ಬಳಸಬೇಕು. ಮಾನವ ಹಾಗೂ ಪ್ರಾಣಿ-ಪಕ್ಷಿ ಸಂಕುಲ ಆಹಾರವಿಲ್ಲದೆ ಹಲವಾರು ದಿನಗಳು ಬದುಕಬಹುದು. ಆದರೆ ಕುಡಿಯುವ ನೀರಿಲ್ಲದೆ ಒಂದು ದಿನಬದುಕುವುದೂ ಅತೀ ಕಷ್ಟ ಎಂದರು.
ಮಳೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಇದರಿಂದ ನೀರಿನ ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ ನೀರನ್ನು ಪೋಲು ಮಾಡದೆ ಎಚ್ಚರಿಕೆಯಿಂದ ಬಳಸಬೇಕು ಎಂದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಮಾತನಾಡಿ, ನೀರನ್ನು ಮಿತವಾಗಿ ಬಳಸಬೇಕು. ನೀರಿನ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ. ನಾವೆಲ್ಲರೂ ಸಂಶೋಧನೆಗಳಿಂದ ಎಷ್ಟೇ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಮುಂದುವರಿದರೂ, ನಮ್ಮಿಂದ ನೀರನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ನೀರು ದೇವರು ಕೊಟ್ಟ ಕಾಣಿಕೆ. ಅದನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕೆಂದರೆ ನೀರನ್ನು ಸಂರಕ್ಷಿಸಬೇಕು ಎಂದರು.
ಈ‌ ಸಂದರ್ಭದಲ್ಲಿ ಸಹಾಯಕ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳಾದ ಯಾಮ ರೆಡ್ಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರುಗಳಾದ ಬಸವರಾಜ ಬೊಮ್ಮನ, ಟಾಟಾ ಟ್ರಸ್ಟ್ ಕಾರ್ಯಕ್ರಮ ಸಂಯೋಜಕ ಮಂಜುನಾಥ, ಅಬ್ಬೆತುಕೂರಿನ ಪಶು ವೈದ್ಯಾಧಿಕಾರಿ ಡಾ. ಶಿವಮಂಗಲಾ, ತೋಟಗಾರಿಕೆ ವಿಸ್ತಾರಣ ಮುಂದಾಳು ರಾಜಕುಮಾರ, ಸಹಾಯಕ ಕೃಷಿ ನಿರ್ದೇಶಕರು ವಿಷಯ ತಜ್ಷರಾದ ರಾಜಕುಮಾರ, ಅಬ್ಬೆಮಕೂರಿನ ಬಿಎಡ್ ವಿದ್ಯಾರ್ಥಿಗಳು, ಹಾಗೂ ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು