11:45 PM Thursday7 - August 2025
ಬ್ರೇಕಿಂಗ್ ನ್ಯೂಸ್
ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ…

ಇತ್ತೀಚಿನ ಸುದ್ದಿ

ನೀರು, ಮಣ್ಣು ದೇವರು ಕೊಟ್ಟ ಕಾಣಿಕೆ ಅದು ಸಂರಕ್ಷಣೆ ಮಾಡಬೇಕು: ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮೀಜಿ

22/02/2025, 19:22

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ರೈತರು ಮಣ್ಣು,ನೀರಿನ ಸಂರಕ್ಷಣೆ ಮಾಡುವುದು ಅತಿ ಅವಶ್ಯಕವಾಗಿದ್ದು, ಮನೆಗೊಂದು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಯಲ್ಲಿ ಪ್ರತಿಯೊಬ್ಬರು ಪಾಲದಾರರಾಗಬೇಕು ಎಂದು ಅಬ್ಬೆ ತುಮಕೂರಿನ ಶ್ರೀ ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮಿಗಳಾದ ಶಿವಶೇಖರ ಸ್ವಾಮಿ ಹೇಳಿದರು
ತಾಲೂಕಿನ ಅಬ್ಬೆತುಮಕೂರ ಗ್ರಾಮದ ಶ್ರೀ ವಿಶ್ವರಾಧ್ಯ ಸಿದ್ದ ಸಂಸ್ಥಾನ ಮಠದಲ್ಲಿ ಜಿಲ್ಲಾ ಪಂಚಾಯತ್ ಯಾದಗಿರಿ, ಕೃಷಿ ಇಲಾಖೆ ಯಾದಗಿರಿ ವತಿಯಿಂದ ಪ್ರದಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ, ಜಲಾನಯನ ಯಾತ್ರೆ ಪ್ರಯುಕ್ತ ಪಾನಿ ಕೀ ಪಾಠ ಶಾಲಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೇಸಿಗೆ ಆರಂಭವಾಗಿದ್ದು, ನೀರನ್ನು ಮಿತವಾಗಿ ಬಳಸಬೇಕು. ಮಾನವ ಹಾಗೂ ಪ್ರಾಣಿ-ಪಕ್ಷಿ ಸಂಕುಲ ಆಹಾರವಿಲ್ಲದೆ ಹಲವಾರು ದಿನಗಳು ಬದುಕಬಹುದು. ಆದರೆ ಕುಡಿಯುವ ನೀರಿಲ್ಲದೆ ಒಂದು ದಿನಬದುಕುವುದೂ ಅತೀ ಕಷ್ಟ ಎಂದರು.
ಮಳೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಇದರಿಂದ ನೀರಿನ ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ ನೀರನ್ನು ಪೋಲು ಮಾಡದೆ ಎಚ್ಚರಿಕೆಯಿಂದ ಬಳಸಬೇಕು ಎಂದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಮಾತನಾಡಿ, ನೀರನ್ನು ಮಿತವಾಗಿ ಬಳಸಬೇಕು. ನೀರಿನ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ. ನಾವೆಲ್ಲರೂ ಸಂಶೋಧನೆಗಳಿಂದ ಎಷ್ಟೇ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಮುಂದುವರಿದರೂ, ನಮ್ಮಿಂದ ನೀರನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ನೀರು ದೇವರು ಕೊಟ್ಟ ಕಾಣಿಕೆ. ಅದನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕೆಂದರೆ ನೀರನ್ನು ಸಂರಕ್ಷಿಸಬೇಕು ಎಂದರು.
ಈ‌ ಸಂದರ್ಭದಲ್ಲಿ ಸಹಾಯಕ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳಾದ ಯಾಮ ರೆಡ್ಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರುಗಳಾದ ಬಸವರಾಜ ಬೊಮ್ಮನ, ಟಾಟಾ ಟ್ರಸ್ಟ್ ಕಾರ್ಯಕ್ರಮ ಸಂಯೋಜಕ ಮಂಜುನಾಥ, ಅಬ್ಬೆತುಕೂರಿನ ಪಶು ವೈದ್ಯಾಧಿಕಾರಿ ಡಾ. ಶಿವಮಂಗಲಾ, ತೋಟಗಾರಿಕೆ ವಿಸ್ತಾರಣ ಮುಂದಾಳು ರಾಜಕುಮಾರ, ಸಹಾಯಕ ಕೃಷಿ ನಿರ್ದೇಶಕರು ವಿಷಯ ತಜ್ಷರಾದ ರಾಜಕುಮಾರ, ಅಬ್ಬೆಮಕೂರಿನ ಬಿಎಡ್ ವಿದ್ಯಾರ್ಥಿಗಳು, ಹಾಗೂ ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು