3:08 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ನೀರು, ಮಣ್ಣು ದೇವರು ಕೊಟ್ಟ ಕಾಣಿಕೆ ಅದು ಸಂರಕ್ಷಣೆ ಮಾಡಬೇಕು: ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮೀಜಿ

22/02/2025, 19:22

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ರೈತರು ಮಣ್ಣು,ನೀರಿನ ಸಂರಕ್ಷಣೆ ಮಾಡುವುದು ಅತಿ ಅವಶ್ಯಕವಾಗಿದ್ದು, ಮನೆಗೊಂದು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಯಲ್ಲಿ ಪ್ರತಿಯೊಬ್ಬರು ಪಾಲದಾರರಾಗಬೇಕು ಎಂದು ಅಬ್ಬೆ ತುಮಕೂರಿನ ಶ್ರೀ ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮಿಗಳಾದ ಶಿವಶೇಖರ ಸ್ವಾಮಿ ಹೇಳಿದರು
ತಾಲೂಕಿನ ಅಬ್ಬೆತುಮಕೂರ ಗ್ರಾಮದ ಶ್ರೀ ವಿಶ್ವರಾಧ್ಯ ಸಿದ್ದ ಸಂಸ್ಥಾನ ಮಠದಲ್ಲಿ ಜಿಲ್ಲಾ ಪಂಚಾಯತ್ ಯಾದಗಿರಿ, ಕೃಷಿ ಇಲಾಖೆ ಯಾದಗಿರಿ ವತಿಯಿಂದ ಪ್ರದಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ, ಜಲಾನಯನ ಯಾತ್ರೆ ಪ್ರಯುಕ್ತ ಪಾನಿ ಕೀ ಪಾಠ ಶಾಲಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೇಸಿಗೆ ಆರಂಭವಾಗಿದ್ದು, ನೀರನ್ನು ಮಿತವಾಗಿ ಬಳಸಬೇಕು. ಮಾನವ ಹಾಗೂ ಪ್ರಾಣಿ-ಪಕ್ಷಿ ಸಂಕುಲ ಆಹಾರವಿಲ್ಲದೆ ಹಲವಾರು ದಿನಗಳು ಬದುಕಬಹುದು. ಆದರೆ ಕುಡಿಯುವ ನೀರಿಲ್ಲದೆ ಒಂದು ದಿನಬದುಕುವುದೂ ಅತೀ ಕಷ್ಟ ಎಂದರು.
ಮಳೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಇದರಿಂದ ನೀರಿನ ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ ನೀರನ್ನು ಪೋಲು ಮಾಡದೆ ಎಚ್ಚರಿಕೆಯಿಂದ ಬಳಸಬೇಕು ಎಂದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಮಾತನಾಡಿ, ನೀರನ್ನು ಮಿತವಾಗಿ ಬಳಸಬೇಕು. ನೀರಿನ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ. ನಾವೆಲ್ಲರೂ ಸಂಶೋಧನೆಗಳಿಂದ ಎಷ್ಟೇ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಮುಂದುವರಿದರೂ, ನಮ್ಮಿಂದ ನೀರನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ನೀರು ದೇವರು ಕೊಟ್ಟ ಕಾಣಿಕೆ. ಅದನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕೆಂದರೆ ನೀರನ್ನು ಸಂರಕ್ಷಿಸಬೇಕು ಎಂದರು.
ಈ‌ ಸಂದರ್ಭದಲ್ಲಿ ಸಹಾಯಕ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳಾದ ಯಾಮ ರೆಡ್ಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರುಗಳಾದ ಬಸವರಾಜ ಬೊಮ್ಮನ, ಟಾಟಾ ಟ್ರಸ್ಟ್ ಕಾರ್ಯಕ್ರಮ ಸಂಯೋಜಕ ಮಂಜುನಾಥ, ಅಬ್ಬೆತುಕೂರಿನ ಪಶು ವೈದ್ಯಾಧಿಕಾರಿ ಡಾ. ಶಿವಮಂಗಲಾ, ತೋಟಗಾರಿಕೆ ವಿಸ್ತಾರಣ ಮುಂದಾಳು ರಾಜಕುಮಾರ, ಸಹಾಯಕ ಕೃಷಿ ನಿರ್ದೇಶಕರು ವಿಷಯ ತಜ್ಷರಾದ ರಾಜಕುಮಾರ, ಅಬ್ಬೆಮಕೂರಿನ ಬಿಎಡ್ ವಿದ್ಯಾರ್ಥಿಗಳು, ಹಾಗೂ ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು