7:47 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು ಆತ್ಮಹತ್ಯೆ!

22/02/2025, 22:01

ತುಮಕೂರು(reporterkarnataka.com): ರಾಜ್ಯ ಸರಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದರೂ
ಮೈಕ್ರೋ ಫೈನಾನ್ಸ್ ಗಳ ಕಿರುಕುಳ ಇನ್ನೂ ತಪ್ಪಿಲ್ಲ.
ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ತವರು ಕ್ಷೇತ್ರದಲ್ಲೇ ಮೈಕ್ರೋ ಫೈನಾನ್ಸ್ ಹಾವಳಿಗೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಬ್ಬ ಆಟೋ ಚಾಲಕ ಹಾಗೂ ಒಬ್ಬರು ಮಹಿಳೆ ಆತ್ಮಹತ್ಯೆಗೆ ಶರಣಾದವರು. ಮೃತಪಟ್ಟವರನ್ನು ಅಂಜನಮೂರ್ತಿ (35) ಹಾಗೂ ಅಜೀಜ್ ಉನಿಸಾ ಎಂದು ಗುರುತಿಸಲಾಗಿದೆ.
ಅಂಜನಮೂರ್ತಿ ಅವರು ಬಟವಾಡಿಯ ಮಹಾಲಕ್ಷ್ಮೀ ನಗರದ ನಿವಾಸಿ ಎಂದು ತಿಳಿದು ಬಂದಿದೆ.
ಅಜೀಜ್ ಉನಿಸಾ ಅವರು ಕುಣಿಗಲ್ ತಾಲೂಕಿನ ಕುತ್ತಿಪುರದ ನಿವಾಸಿ.
ಅಜೀಜ್ ಉನಿಸಾ ಅವರು ಇಬ್ಬರು ಹೆಣ್ಣುಮಕ್ಕಳ ಮದುವೆಗೆ 12 ಲಕ್ಷ ರೂಪಾಯಿ ಸಾಲವನ್ನು ಬೇರೆ ಬೇರೆ ಫೈನಾನ್ಸ್ ಗಳಿಂದ ತೆಗೆದಿದ್ದರು.
ಆಶೀರ್ವಾದ, ಸೂರ್ಯೋದಯ, ಬಜಾಜ್ ಸೇರಿದಂತೆ ವಿವಿಧ ಫೈನಾನ್ಸ್ ನಿಂದ ಉನ್ನಿಸಾ ಸಾಲವನ್ನು ಪಡೆದಿದ್ದರು. ಕಳೆದ ಕೆಲವು ತಿಂಗಳಿಂದ ಸಾಲ ಮರುಪಾವತಿ ಮಾಡಿರಲಿಲ್ಲ. ಮನೆಗೆ ಬಂದು ಹಣ ಕಟ್ಟುವಂತೆ ನಿಂದಿಸಿರುವ ಆರೋಪ ಕೇಳಿ ಬಂದಿದೆ.
ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು