11:39 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು ಆತ್ಮಹತ್ಯೆ!

22/02/2025, 22:01

ತುಮಕೂರು(reporterkarnataka.com): ರಾಜ್ಯ ಸರಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದರೂ
ಮೈಕ್ರೋ ಫೈನಾನ್ಸ್ ಗಳ ಕಿರುಕುಳ ಇನ್ನೂ ತಪ್ಪಿಲ್ಲ.
ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ತವರು ಕ್ಷೇತ್ರದಲ್ಲೇ ಮೈಕ್ರೋ ಫೈನಾನ್ಸ್ ಹಾವಳಿಗೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಬ್ಬ ಆಟೋ ಚಾಲಕ ಹಾಗೂ ಒಬ್ಬರು ಮಹಿಳೆ ಆತ್ಮಹತ್ಯೆಗೆ ಶರಣಾದವರು. ಮೃತಪಟ್ಟವರನ್ನು ಅಂಜನಮೂರ್ತಿ (35) ಹಾಗೂ ಅಜೀಜ್ ಉನಿಸಾ ಎಂದು ಗುರುತಿಸಲಾಗಿದೆ.
ಅಂಜನಮೂರ್ತಿ ಅವರು ಬಟವಾಡಿಯ ಮಹಾಲಕ್ಷ್ಮೀ ನಗರದ ನಿವಾಸಿ ಎಂದು ತಿಳಿದು ಬಂದಿದೆ.
ಅಜೀಜ್ ಉನಿಸಾ ಅವರು ಕುಣಿಗಲ್ ತಾಲೂಕಿನ ಕುತ್ತಿಪುರದ ನಿವಾಸಿ.
ಅಜೀಜ್ ಉನಿಸಾ ಅವರು ಇಬ್ಬರು ಹೆಣ್ಣುಮಕ್ಕಳ ಮದುವೆಗೆ 12 ಲಕ್ಷ ರೂಪಾಯಿ ಸಾಲವನ್ನು ಬೇರೆ ಬೇರೆ ಫೈನಾನ್ಸ್ ಗಳಿಂದ ತೆಗೆದಿದ್ದರು.
ಆಶೀರ್ವಾದ, ಸೂರ್ಯೋದಯ, ಬಜಾಜ್ ಸೇರಿದಂತೆ ವಿವಿಧ ಫೈನಾನ್ಸ್ ನಿಂದ ಉನ್ನಿಸಾ ಸಾಲವನ್ನು ಪಡೆದಿದ್ದರು. ಕಳೆದ ಕೆಲವು ತಿಂಗಳಿಂದ ಸಾಲ ಮರುಪಾವತಿ ಮಾಡಿರಲಿಲ್ಲ. ಮನೆಗೆ ಬಂದು ಹಣ ಕಟ್ಟುವಂತೆ ನಿಂದಿಸಿರುವ ಆರೋಪ ಕೇಳಿ ಬಂದಿದೆ.
ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು