11:11 PM Sunday23 - February 2025
ಬ್ರೇಕಿಂಗ್ ನ್ಯೂಸ್
ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು… ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್… ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಿ: ಸರಕಾರಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಳೆ ಬೆಳೆಗೆ ದೃಷ್ಟಿ ತಾಗದಂತೆ ಅರೆಬೆತ್ತಲೆ ಮಾಡಲ್ ಗಳ ಫೋಟೋ ಅಳವಡಿಸಿದ ಕಿಲಾಡಿ… ಹಾವೇರಿ ಜಾನಪದ ವಿಶ್ವವಿದ್ಯಾಲಯ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ?: ರಾಜಕೀಯ ಕರಿನೆರಳು.!? State Budget | ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ… Deeptech & AI | ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನವೋದ್ಯಮಗಳಿಗೆ ನೆರವು: ಸಚಿವದ್ವಯರಾದ… ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಮಾಜಿ ಸಿಎಂ ಬಸವರಾಜ… Lokayukta | ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ನಿರೀಕ್ಷಿತ: ಹುಬ್ಬಳ್ಳಿಯಲ್ಲಿ ಕೇಂದ್ರ…

ಇತ್ತೀಚಿನ ಸುದ್ದಿ

ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ: ಉಭಯ ರಾಜ್ಯಗಳ ಬಸ್ ಸಂಚಾರ ರದ್ದು; ಪ್ರಯಾಣಿಕರ ಪರದಾಟ

23/02/2025, 23:04

ಬೆಳಗಾವಿ(reporterkarnataka.com): ಕೆಎಸ್ಸಾರ್ಟಿಸಿ‌ ಬಸ್ ಕಂಡೆಕ್ಟರ್ ಮೇಲೆ ಹಲ್ಲೆ ನಡೆದ ಘಟನೆ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಪ್ರಯಾಣಿಕರು ಪರದಾಡುವಂತಾಗಿದೆ.
ಬೆಳಗಾವಿ ಭಾಗದಲ್ಲಿ ಕರವೇ, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಕೊಲ್ಲಾಪುರಕ್ಕೆ ತೆರಳುವ ಎಲ್ಲ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರವನ್ನು ರದ್ದುಗೊಳಿಸಲಾಗಿದೆ.
ನಿಪ್ಪಾಣಿ,ಚಿಕ್ಕೋಡಿ,ಬೆಳಗಾವಿ ಮಾರ್ಗವಾಗಿ ತೆರಳುವ ಬಸ್ ಗಳ ಸಂಚಾರ ರದ್ದುಗೊಂಡಿದೆ.
ಈ ಮಾರ್ಗವಾಗಿ ಪ್ರತಿದಿನ ದುಮಾರು 100ಕ್ಕೂ ಅಧಿಕ ಬಸ್ ಗಳು ಸಂಚಾರಿಸುತ್ತಿದ್ದವು.ಮಹಾರಾಷ್ಟ್ರದಿಂದಲೂ ಯಾವುದೇ ಬಸ್ ಗಳು ಕರ್ನಾಟಕದ ಕಡೆ ಬರುತ್ತಿಲ್ಲ.ಬಸ್ ಸಂಚಾರವನ್ನು ಮಹಾ ಸರ್ಕಾರ ಬಂದ್ ಮಾಡಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು