12:12 PM Tuesday7 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ರಂಗೋತ್ಸವ ಸಾಂಸ್ಕೃತಿಕ ಸ್ಪರ್ಧೆಯ ಪಟ್ಟಿಯಿಂದ ಭೂತಾರಾಧನೆ ಕೈ ಬಿಡಲು ತುಳು ಸಾಹಿತ್ಯ ಅಕಾಡೆಮಿ ಆಗ್ರಹ

23/02/2025, 23:18

ಮಂಗಳೂರು(reporterkarnataka.com): ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ರಂಗೋತ್ಸವ ಕಾರ್ಯಕ್ರಮದ ಪಟ್ಟಿಯಿಂದ ಭೂತಾರಾಧನೆಯ ಉಲ್ಲೇಖವನ್ನು ಕೈ ಬಿಡುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಯೋಜನಾ ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ದೇಶದ ವಿಭಿನ್ನ ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಅಭಿರುಚಿ ಮೂಡಿಸುವ ಸಲುವಾಗಿ ಆಯೋಜಿಸಿರುವ ರಂಗೋತ್ಸವ ಕಾರ್ಯಕ್ರಮವು ಒಂದು ಉತ್ತಮ ಪರಿಕಲ್ಪನೆಯಾಗಿದೆ. ರಂಗೋತ್ಸವದ ಸಲುವಾಗಿ ಯಾವೆಲ್ಲ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಿದೆ ಎಂಬ ಬಗ್ಗೆ ಉದಾಹರಣೆಗಾಗಿ ನೀಡಲಾಗಿರುವ ಪಟ್ಟಿಯಲ್ಲಿ ಭೂತಾರಾಧನೆಯನ್ನು ಉಲ್ಲೇಖ ಮಾಡಿರುವುದು ಇಲಾಖೆಯ ಸರಿಯಾದ ನಡೆಯಾಗಿರುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಸುತ್ತೋಲೆಯಿಂದ ಭೂತಾರಾಧನೆಯ ಹೆಸರನ್ನು ಕೈ ಬಿಟ್ಟು ಪ್ರತ್ಯೇಕ ಸುತ್ತೋಲೆಯನ್ನು ಪ್ರಕಟಿಸಬೇಕೆಂದು ಆಗ್ರಹಿಸಿದ್ದಾರೆ. ಭೂತಾರಾಧನೆಯು ಕರಾವಳಿಯ ಅತ್ಯುನ್ನತ ಸಾಂಸ್ಕೃತಿಕ ಹಾಗೂ ಆರಾಧನಾ ಪರಂಪರೆಯಾಗಿರುತ್ತದೆ. ಆದರೆ ಭೂತಾರಾಧನೆಯನ್ನು ಸಾಂಸ್ಕೃತಿಕ ಸ್ಪರ್ಧೆಯ ಭಾಗವಾಗಿ ಪರಿಗಣಿಸುವುದು ಸೂಕ್ತವಲ್ಲ. ಆರಾಧನ ಪ್ರಕಾರ ಒಂದನ್ನು ಶಾಲೆಗಳ ಸ್ಪರ್ಧಾ ವೇದಿಕೆಗೆ ತಂದಾಗ ಜನರ ನಂಬಿಕೆಗೆ ಘಾಸಿಯಾಗುವುದು ಸಹಜ ಎಂದು ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಇಲಾಖೆಯು ತಕ್ಷಣ ಈಗಾಗಲೇ ಹೊರಡಿಸಿರುವ ಸುತ್ತೋಲೆಯನ್ನು ಪುನರ್ ಪರಿಶೀಲನೆ ಮಾಡಿ ಉದಾಹರಣೆಗಾಗಿ ನೀಡಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿರುವ ಭೂತಾರಾಧನೆಯ ಹೆಸರನ್ನು ಕೈಬಿಡುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು