7:07 AM Sunday29 - June 2025
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:… ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ… ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ… BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್… ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಅತ್ಯಾಧುನಿಕ ಭೂಗತ ರಸ್ತೆ ಜಾಲ, ಪೆರಿಫೆರಲ್ ರಿಂಗ್ ರಸ್ತೆ: ಹೆದ್ದಾರಿ ಸಚಿವ…

ಇತ್ತೀಚಿನ ಸುದ್ದಿ

ರಂಗೋತ್ಸವ ಸಾಂಸ್ಕೃತಿಕ ಸ್ಪರ್ಧೆಯ ಪಟ್ಟಿಯಿಂದ ಭೂತಾರಾಧನೆ ಕೈ ಬಿಡಲು ತುಳು ಸಾಹಿತ್ಯ ಅಕಾಡೆಮಿ ಆಗ್ರಹ

23/02/2025, 23:18

ಮಂಗಳೂರು(reporterkarnataka.com): ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ರಂಗೋತ್ಸವ ಕಾರ್ಯಕ್ರಮದ ಪಟ್ಟಿಯಿಂದ ಭೂತಾರಾಧನೆಯ ಉಲ್ಲೇಖವನ್ನು ಕೈ ಬಿಡುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಯೋಜನಾ ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ದೇಶದ ವಿಭಿನ್ನ ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಅಭಿರುಚಿ ಮೂಡಿಸುವ ಸಲುವಾಗಿ ಆಯೋಜಿಸಿರುವ ರಂಗೋತ್ಸವ ಕಾರ್ಯಕ್ರಮವು ಒಂದು ಉತ್ತಮ ಪರಿಕಲ್ಪನೆಯಾಗಿದೆ. ರಂಗೋತ್ಸವದ ಸಲುವಾಗಿ ಯಾವೆಲ್ಲ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಿದೆ ಎಂಬ ಬಗ್ಗೆ ಉದಾಹರಣೆಗಾಗಿ ನೀಡಲಾಗಿರುವ ಪಟ್ಟಿಯಲ್ಲಿ ಭೂತಾರಾಧನೆಯನ್ನು ಉಲ್ಲೇಖ ಮಾಡಿರುವುದು ಇಲಾಖೆಯ ಸರಿಯಾದ ನಡೆಯಾಗಿರುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಸುತ್ತೋಲೆಯಿಂದ ಭೂತಾರಾಧನೆಯ ಹೆಸರನ್ನು ಕೈ ಬಿಟ್ಟು ಪ್ರತ್ಯೇಕ ಸುತ್ತೋಲೆಯನ್ನು ಪ್ರಕಟಿಸಬೇಕೆಂದು ಆಗ್ರಹಿಸಿದ್ದಾರೆ. ಭೂತಾರಾಧನೆಯು ಕರಾವಳಿಯ ಅತ್ಯುನ್ನತ ಸಾಂಸ್ಕೃತಿಕ ಹಾಗೂ ಆರಾಧನಾ ಪರಂಪರೆಯಾಗಿರುತ್ತದೆ. ಆದರೆ ಭೂತಾರಾಧನೆಯನ್ನು ಸಾಂಸ್ಕೃತಿಕ ಸ್ಪರ್ಧೆಯ ಭಾಗವಾಗಿ ಪರಿಗಣಿಸುವುದು ಸೂಕ್ತವಲ್ಲ. ಆರಾಧನ ಪ್ರಕಾರ ಒಂದನ್ನು ಶಾಲೆಗಳ ಸ್ಪರ್ಧಾ ವೇದಿಕೆಗೆ ತಂದಾಗ ಜನರ ನಂಬಿಕೆಗೆ ಘಾಸಿಯಾಗುವುದು ಸಹಜ ಎಂದು ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಇಲಾಖೆಯು ತಕ್ಷಣ ಈಗಾಗಲೇ ಹೊರಡಿಸಿರುವ ಸುತ್ತೋಲೆಯನ್ನು ಪುನರ್ ಪರಿಶೀಲನೆ ಮಾಡಿ ಉದಾಹರಣೆಗಾಗಿ ನೀಡಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿರುವ ಭೂತಾರಾಧನೆಯ ಹೆಸರನ್ನು ಕೈಬಿಡುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು