2:27 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ರಂಗೋತ್ಸವ ಸಾಂಸ್ಕೃತಿಕ ಸ್ಪರ್ಧೆಯ ಪಟ್ಟಿಯಿಂದ ಭೂತಾರಾಧನೆ ಕೈ ಬಿಡಲು ತುಳು ಸಾಹಿತ್ಯ ಅಕಾಡೆಮಿ ಆಗ್ರಹ

23/02/2025, 23:18

ಮಂಗಳೂರು(reporterkarnataka.com): ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ರಂಗೋತ್ಸವ ಕಾರ್ಯಕ್ರಮದ ಪಟ್ಟಿಯಿಂದ ಭೂತಾರಾಧನೆಯ ಉಲ್ಲೇಖವನ್ನು ಕೈ ಬಿಡುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಯೋಜನಾ ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ದೇಶದ ವಿಭಿನ್ನ ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಅಭಿರುಚಿ ಮೂಡಿಸುವ ಸಲುವಾಗಿ ಆಯೋಜಿಸಿರುವ ರಂಗೋತ್ಸವ ಕಾರ್ಯಕ್ರಮವು ಒಂದು ಉತ್ತಮ ಪರಿಕಲ್ಪನೆಯಾಗಿದೆ. ರಂಗೋತ್ಸವದ ಸಲುವಾಗಿ ಯಾವೆಲ್ಲ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಿದೆ ಎಂಬ ಬಗ್ಗೆ ಉದಾಹರಣೆಗಾಗಿ ನೀಡಲಾಗಿರುವ ಪಟ್ಟಿಯಲ್ಲಿ ಭೂತಾರಾಧನೆಯನ್ನು ಉಲ್ಲೇಖ ಮಾಡಿರುವುದು ಇಲಾಖೆಯ ಸರಿಯಾದ ನಡೆಯಾಗಿರುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಸುತ್ತೋಲೆಯಿಂದ ಭೂತಾರಾಧನೆಯ ಹೆಸರನ್ನು ಕೈ ಬಿಟ್ಟು ಪ್ರತ್ಯೇಕ ಸುತ್ತೋಲೆಯನ್ನು ಪ್ರಕಟಿಸಬೇಕೆಂದು ಆಗ್ರಹಿಸಿದ್ದಾರೆ. ಭೂತಾರಾಧನೆಯು ಕರಾವಳಿಯ ಅತ್ಯುನ್ನತ ಸಾಂಸ್ಕೃತಿಕ ಹಾಗೂ ಆರಾಧನಾ ಪರಂಪರೆಯಾಗಿರುತ್ತದೆ. ಆದರೆ ಭೂತಾರಾಧನೆಯನ್ನು ಸಾಂಸ್ಕೃತಿಕ ಸ್ಪರ್ಧೆಯ ಭಾಗವಾಗಿ ಪರಿಗಣಿಸುವುದು ಸೂಕ್ತವಲ್ಲ. ಆರಾಧನ ಪ್ರಕಾರ ಒಂದನ್ನು ಶಾಲೆಗಳ ಸ್ಪರ್ಧಾ ವೇದಿಕೆಗೆ ತಂದಾಗ ಜನರ ನಂಬಿಕೆಗೆ ಘಾಸಿಯಾಗುವುದು ಸಹಜ ಎಂದು ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಇಲಾಖೆಯು ತಕ್ಷಣ ಈಗಾಗಲೇ ಹೊರಡಿಸಿರುವ ಸುತ್ತೋಲೆಯನ್ನು ಪುನರ್ ಪರಿಶೀಲನೆ ಮಾಡಿ ಉದಾಹರಣೆಗಾಗಿ ನೀಡಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿರುವ ಭೂತಾರಾಧನೆಯ ಹೆಸರನ್ನು ಕೈಬಿಡುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು