12:57 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ರಂಗೋತ್ಸವ ಸಾಂಸ್ಕೃತಿಕ ಸ್ಪರ್ಧೆಯ ಪಟ್ಟಿಯಿಂದ ಭೂತಾರಾಧನೆ ಕೈ ಬಿಡಲು ತುಳು ಸಾಹಿತ್ಯ ಅಕಾಡೆಮಿ ಆಗ್ರಹ

23/02/2025, 23:18

ಮಂಗಳೂರು(reporterkarnataka.com): ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ರಂಗೋತ್ಸವ ಕಾರ್ಯಕ್ರಮದ ಪಟ್ಟಿಯಿಂದ ಭೂತಾರಾಧನೆಯ ಉಲ್ಲೇಖವನ್ನು ಕೈ ಬಿಡುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಯೋಜನಾ ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ದೇಶದ ವಿಭಿನ್ನ ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಅಭಿರುಚಿ ಮೂಡಿಸುವ ಸಲುವಾಗಿ ಆಯೋಜಿಸಿರುವ ರಂಗೋತ್ಸವ ಕಾರ್ಯಕ್ರಮವು ಒಂದು ಉತ್ತಮ ಪರಿಕಲ್ಪನೆಯಾಗಿದೆ. ರಂಗೋತ್ಸವದ ಸಲುವಾಗಿ ಯಾವೆಲ್ಲ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಿದೆ ಎಂಬ ಬಗ್ಗೆ ಉದಾಹರಣೆಗಾಗಿ ನೀಡಲಾಗಿರುವ ಪಟ್ಟಿಯಲ್ಲಿ ಭೂತಾರಾಧನೆಯನ್ನು ಉಲ್ಲೇಖ ಮಾಡಿರುವುದು ಇಲಾಖೆಯ ಸರಿಯಾದ ನಡೆಯಾಗಿರುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಸುತ್ತೋಲೆಯಿಂದ ಭೂತಾರಾಧನೆಯ ಹೆಸರನ್ನು ಕೈ ಬಿಟ್ಟು ಪ್ರತ್ಯೇಕ ಸುತ್ತೋಲೆಯನ್ನು ಪ್ರಕಟಿಸಬೇಕೆಂದು ಆಗ್ರಹಿಸಿದ್ದಾರೆ. ಭೂತಾರಾಧನೆಯು ಕರಾವಳಿಯ ಅತ್ಯುನ್ನತ ಸಾಂಸ್ಕೃತಿಕ ಹಾಗೂ ಆರಾಧನಾ ಪರಂಪರೆಯಾಗಿರುತ್ತದೆ. ಆದರೆ ಭೂತಾರಾಧನೆಯನ್ನು ಸಾಂಸ್ಕೃತಿಕ ಸ್ಪರ್ಧೆಯ ಭಾಗವಾಗಿ ಪರಿಗಣಿಸುವುದು ಸೂಕ್ತವಲ್ಲ. ಆರಾಧನ ಪ್ರಕಾರ ಒಂದನ್ನು ಶಾಲೆಗಳ ಸ್ಪರ್ಧಾ ವೇದಿಕೆಗೆ ತಂದಾಗ ಜನರ ನಂಬಿಕೆಗೆ ಘಾಸಿಯಾಗುವುದು ಸಹಜ ಎಂದು ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಇಲಾಖೆಯು ತಕ್ಷಣ ಈಗಾಗಲೇ ಹೊರಡಿಸಿರುವ ಸುತ್ತೋಲೆಯನ್ನು ಪುನರ್ ಪರಿಶೀಲನೆ ಮಾಡಿ ಉದಾಹರಣೆಗಾಗಿ ನೀಡಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿರುವ ಭೂತಾರಾಧನೆಯ ಹೆಸರನ್ನು ಕೈಬಿಡುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು