6:25 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಗಡಿಪಾರು ಮಾಡಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

24/02/2025, 22:06

ಹಾವೇರಿ(reporterkarnataka.com): ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಮೊದಲು ಸರಕಾರ ಒದ್ದು ಹೊರಗೆ ಹಾಕಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರಕಾರ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ‌ಮಾತನಾಡಿದ ಅವರು,
ದಿಟ್ಟವಾಗಿ ಕನ್ನಡ ಮಾತನಾಡುತ್ತೇನೆ ಎಂದ ಕಂಡಕ್ಟರ್ ಗೆ ಅಭಿನಂದನೆ. ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಮೊದಲು ಸರಕಾರ ಒದ್ದು ಹೊರಗೆ ಹಾಕಬೇಕು. ಕಂಡಕ್ಟರ್ ಮೇಲಿನ ಫೋಕ್ಸೋ ಕೇಸ್ ನ್ನು ಕೂಡಲೇ ಹಿಂಪಡೆಯಬೇಕು ಈ ಘಟನೆಯ ಬಗ್ಗೆ ಮಂತ್ರಿಗಳು ಮೃದುವಾಗಿ ಮಾತನಾಡುತ್ತಾರೆ. ಮಂತ್ರಿಗಳು ಎಲ್ಲೋ ಮರಾಠಿ ಮಾತನಾಡುವವರ ಮುಲಾಜಿಗೆ ಬಿದ್ದಿದ್ದಾರೆ. ಕನ್ನಡ ಚಳುವಳಿಗಾರರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ.
ಕೂಡಲೇ ಸರಕಾರ ಮಹಾರಾಷ್ಟ್ರ ಸರಕಾರದ ಜೊತೆ ಮಾತನಾಡಬೇಕು, ಪುಂಡರಿಗೆ ಎಚ್ಚರಿಕೆ ಕೊಡಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರಕಾರ ಬಿಗಿ ಕ್ರಮ ಕೈಗೊಳ್ಳಬೇಕು. ಇಲ್ಲಿಯ ಅನ್ನ ತಿಂದು, ನೀರು ಕುಡಿದು ನಾಲಾಯಕ್ ಅನ್ನುವ ಪದ ಬಳಕೆ ಮಾಡುವುದು ಸರಿಯಲ್ಲ
ಕೂಡಲೇ ಇಂಥವರನ್ನು ಗಡಿಪಾರು ಮಾಡಬೇಕು. ಹಿಂದೆ ನಮ್ಮ ಸರಕಾರ ಇದ್ದಾಗ ಇಂಥದ್ದೇ ಒಂದು ಪ್ರಕರಣ ನಡೆದಿತ್ತು, ಆಗ ನಮ್ಮ ಸರಕಾರ ಕಠಿಣ ಕ್ರಮ ಕೈಗೊಂಡಿತ್ತು ಎಂದು ಹೇಳಿದರು.
ಎಸ್ಸಿಪಿ ಟಿಎಸ್ ಪಿ ಹಣ ಬೇರೆ ಉದ್ದೇಶಕ್ಕೆ ಬಳಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಸರಕಾರ. ಎಸ್ಸಿ ಎಸ್ಟಿ ಸಮಾಜಕ್ಕೆ ಅನ್ಯಾಯ ಮಾಡುತ್ತಿದೆ. ಎಸ್ಸಿಪಿ, ಟಿಎಸ್ಪಿ ಹಣವನ್ನೆ ಗ್ಯಾರಂಟಿಗಳಿಗೆ ಬಳಕೆ ಮಾಡಿದ್ದಾರೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವವರು ಮೊದಲು ಅಂತಹ ಸಮಾಜಗಳಿಗೆ ಹಣ ಬಿಡುಗಡೆ ಮಾಡಲಿ. ಎಸ್ ಸಿ ಎಸ್ ಟಿ ನಿಗಮಗಳಿಗೆ ಮೊದಲೇ ಕಡಿಮೆ ಹಣ ನಿಗದಿ ಮಾಡಿದ್ದಾರೆ, ಅದರಲ್ಲಿ ಈವರೆಗೆ ಕೇವಲ 25% ಮಾತ್ರ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು