6:35 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬಂಟ್ವಾಳ: ಚೆನ್ನೈತ್ತೋಡಿ ಬಳಿ ಅಂಗಡಿಗೆ ನುಗ್ಗಿದ ಕಾರು; ಗಂಭೀರ ಗಾಯಗೊಂಡ ವೃದ್ದ ಮಹಿಳೆ ಸಾವು

25/02/2025, 13:31

ಮಂಗಳೂರು(reporterkarnataka.com): ಕಾರೊಂದು ಅಂಗಡಿಗೆ ನುಗ್ಗಿದ ಪರಿಣಾಮ ವೃದ್ಧ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ.
ಶೋಭಾ ಎಂಬವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಪರಿಣಾಮ ವಾಮದಪದವು ನಿವಾಸಿ ಸುಮತಿ(91) ಎಂಬವರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.


ವೇಗವಾಗಿ ಬಂದ ಕಾರು ಗ್ರಾಹಕ‌ ಹಾಗೂ ಅಂಗಡಿ ಮುಂದೆ ಕುಳಿತಿದ್ದ ವೃದ್ಧೆಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ವೃದ್ದೆ ಸುಮತಿ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಭೀಕರ ದೃಶ್ಯ ಅಂಗಡಿ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಅಂಗಡಿಗೆ ಬಂದಿದ್ದ ಗ್ರಾಹಕ ಲೂಯಿಸ್ ಡಿಕೋಸ್ತಾ ಅವರಿಗೆ ಡಿಕ್ಕಿ ಹೊಡೆದ ಕಾರು ಬಳಿಕ ಅಂಗಡಿ ಮುಂದೆ ಕೂತಿದ್ದ ವೃದ್ಧೆ ಸುಮತಿ ಅವರಿಗೆ ಡಿಕ್ಕಿ ಹೊಡೆದಿದೆ.
ಘಟನೆ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು