10:36 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

Pocso | ಬೆಂಗಳೂರು: ನಿರಂತರ ಅತ್ಯಾಚಾರಕ್ಕೊಳಗಾದ ಬಾಲಕಿಯ ಮೇಲೆ ಪೊಲೀಸ್ ಕಾನ್‌ಸ್ಟೇಬಲ್ ನಿಂದ ಅತ್ಯಾಚಾರ !

25/02/2025, 22:03

ಬೆಂಗಳೂರು(reporterkarnataka.com):ಅತ್ಯಾಚಾರಕ್ಕೊಳಗಾಗಿ ದೂರು ನೀಡಲು ಪೊಲೀಸ್ ಠಾಣೆಗೆ ಹೋದ ಬಾಲಕಿಗೆ ನೆರವು ನೀಡಿಬೇಕಾಗಿದ್ದ ಪೊಲೀಸ್ ಇಲಾಖೆಯ ಕಾನ್ ಸ್ಟೇಬಲ್ ಓರ್ವ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಸಂಬಂಧ ಕಾನ್ ಸ್ಟೇಬಲ್ ಸಹಿತ ಇಬ್ಬರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.
17 ವರ್ಷದ ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬೊಮ್ಮನಹಳ್ಳಿ ಠಾಣೆ ಕಾನ್‌ಸ್ಟೇಬಲ್ ಅರುಣ್ ಹಾಗೂ ಸಂತ್ರಸ್ತೆಯ ಸ್ನೇಹಿತನನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ಸಂತ್ರಸ್ತೆ ಬಾಲಕಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಳು. ಈಕೆಗೆ ಪಕ್ಕದ ಮನೆಯ ವಿವಾಹಿತ ವ್ಯಕ್ತಿಯ ಪರಿಚಯವಾಗಿತ್ತು. ಆ ವ್ಯಕ್ತಿ ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ, ಬಾಲಕಿಯ ಮೇಲೆ ನಿರಂತರ ಅತ್ಯಾಚಾರವೆಸಗಿ ಹಲ್ಲೆ ನಡೆಸಿದ್ದಾನೆ. ಈ ವಿಷಯವನ್ನು ಬಾಲಕಿ ತನ್ನ ತಾಯಿಗೆ ತಿಳಿಸಿದ್ದಳು. ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದಾಗ, ಅಲ್ಲಿನ ಪೊಲೀಸ್ ಕಾನ್‌ಸ್ಟೇಬಲ್ ಅರುಣ್, ನ್ಯಾಯ ಕೊಡಿಸುವ ಭರವಸೆಯ ಜೊತೆಗೆ ಕೆಲಸ ಕೊಡಿಸುವುದಾಗಿ ನಂಬಿಸಿದ್ದನು. ಈ ಮಧ್ಯೆ ಬಿಟಿಎಂ ಲೇಔಟ್‌ನ ಹೋಟೆಲ್ ಒಂದರ ಕೊಠಡಿಗೆ ಬಾಲಕಿಯನ್ನು ಕರೆಸಿಕೊಂಡ ಕಾನ್‌ಸ್ಟೇಬಲ್, ಮದ್ಯದಲ್ಲಿ ಅಮಲು ಬರುವ ಔಷಧಿ ಬೆರೆಸಿ ಕುಡಿಸಿ, ಅತ್ಯಾಚಾರವೆಸಗಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ತನ್ನ ಬಳಿ ಇರುವ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.
ಇಬ್ಬರು ಆರೋಪಿಗಳ ವಿರುದ್ದ ಪೋಕ್ಸೋ ಮತ್ತು ಬಿಎನ್‌ಎಸ್ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಮೈಕೋ ಲೇಔಟ್ ಠಾಣೆ ಪೊಲೀಸರು, ಕೃತ್ಯ ನಡೆದ ಸ್ಥಳ ಆಧರಿಸಿ ಬೊಮ್ಮನಹಳ್ಳಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು