6:53 PM Wednesday26 - February 2025
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ ಮಹಾಶಿವರಾತ್ರಿ ಸಂಭ್ರಮ: ಕಪಿಲೆಯಲ್ಲಿ ಮಿಂದ ಭಕ್ತ… ವಿಧಾನ ಸೌಧ ಆವರಣದಲ್ಲಿ ಪುಸ್ತಕ ಮೇಳ: ಸಿದ್ಧತಾ ಕಾರ್ಯ ಪರಿಶೀಲಿಸಿದ ಸ್ಪೀಕರ್ ಖಾದರ್ Forest Fire | ಚಿಕ್ಕಮಗಳೂರು: ದೇವರು ಮನೆಗುಡ್ಡದಲ್ಲಿ ಕಾಡ್ಗಿಚ್ಚು; ಅರಣ್ಯ ಇಲಾಖೆ ಪರಿಶ್ರಮದಿಂದ… Pocso | ಬೆಂಗಳೂರು: ನಿರಂತರ ಅತ್ಯಾಚಾರಕ್ಕೊಳಗಾದ ಬಾಲಕಿಯ ಮೇಲೆ ಪೊಲೀಸ್ ಕಾನ್‌ಸ್ಟೇಬಲ್ ನಿಂದ… Exams | ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ… ಐಎಂಎ ಹಗರಣ: ರಂಜಾನ್ ಹಬ್ಬಕ್ಕೂ ಮುನ್ನ ಹಣ ಕಳೆದುಕೊಂಡವರಿಗೆ ಹರಿಹಾರ: ಸಚಿವ ಕೃಷ್ಣ… Basavanna | ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ… Sub Jail | ಮಂಗಳೂರು ಜೈಲ್ ಒಳಗೆ 2 ಪೊಟ್ಟಣ ಎಸೆತ: ಮಾಜಿ… ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು… ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್…

ಇತ್ತೀಚಿನ ಸುದ್ದಿ

Forest Fire | ಚಿಕ್ಕಮಗಳೂರು: ದೇವರು ಮನೆಗುಡ್ಡದಲ್ಲಿ ಕಾಡ್ಗಿಚ್ಚು; ಅರಣ್ಯ ಇಲಾಖೆ ಪರಿಶ್ರಮದಿಂದ ತಪ್ಪಿದ ದೊಡ್ಡ ಅನಾಹುತ

25/02/2025, 22:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಬಾಳೂರು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ದೇವರು ಮನೆ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ತ್ವರಿತ ಕಾರ್ಯಾಚರಣೆಯ ಮೂಲಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಪ್ರದೇಶಕ್ಕೆ ಪ್ರವಾಸಿಗರು ಹಾಗೂ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ಕಾಡ್ಗಿಚ್ಚಿನಿಂದ ಭಾರೀ ಹಾನಿ ಸಂಭವಿಸುವ ಸಾಧ್ಯತೆ ಇತ್ತು. ಯಾರೋ ಕಿಡಿಗೇಡಿಗಳು ಹಚ್ಚಿದ ಬೆಂಕಿಯಿಂದ ಹುಲ್ಲುಗಾವಲು, ಗಿಡಗಂಟಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.


ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ರಂಜಿತ್, ಗಸ್ತು ಅರಣ್ಯ ಪಾಲಕ ಅಭಿಜಿತ್, ಉಮೇಶ್ ಮತ್ತು ಅರಣ್ಯ ವೀಕ್ಷಕ ದಿನೇಶ್ ಅವರ ತಂಡ ದುರಂತವನ್ನು ತಡೆಯಲು ಹರಸಾಹಸ ಪಟ್ಟು ಬೆಂಕಿ ನಂದಿಸಿದರು. ಅವರು ತಕ್ಷಣವೇ ಸ್ಥಳಕ್ಕಾಗಮಿಸಿ ಸೂಕ್ತ ಕ್ರಮ ಕೈಗೊಂಡುದರಿಂದ ದೊಡ್ಡ ಪ್ರಮಾಣದ ಹಾನಿ ತಪ್ಪಿತು.
ಇಲ್ಲಿನ ಐತಿಹಾಸಿಕ ಸ್ಥಳದ ಸುರಕ್ಷತೆಗಾಗಿ ಹಾಗೂ ಇಂತಹ ಘಟನೆಗಳು ಪುನರಾವೃತಗೊಳ್ಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪ್ರದೇಶದಲ್ಲಿ ನಿಗಾ ದಳವನ್ನು ಬಿಗಿಗೊಳಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು