9:28 AM Thursday16 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

Mahashivaratri | ಮಹಾದೇವನ ಮಹೋತ್ಸವಕ್ಕೆ ಹುಬ್ಬಳ್ಳಿ ಸನ್ನದ್ಧ; ಭಕ್ತಿ ಸಂಗೀತ ಸುಧೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಾರಥ್ಯ

25/02/2025, 23:09

*ದೇಶಪಾಂಡೆ ನಗರದ ಜಮಖಾನ ಮೈದಾನದಲ್ಲಿ ಶ್ರೀ ಕಾಶಿ ವಿಶ್ವನಾಥ ಮಾದರಿ ಶಿವಲಿಂಗ ಪ್ರತಿಷ್ಠಾಪನೆ*

ಹುಬ್ಬಳ್ಳಿ(reporterkarnataka.com): ವಾಣಿಜ್ಯ ನಗರಿ ಹುಬ್ಬಳ್ಳಿ ಈಗ ಮಹಾದೇವನ ಭಕ್ತಿ ವೈಭವದ ಮಹೋತ್ಸವಕ್ಕೆ ಸಿದ್ಧವಾಗುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಸಂಸದರ ಅದ್ಧೂರಿ ಸಾಂಸ್ಕೃತಿಕ ಮಹೋತ್ಸವಕ್ಕೆ ಸಾಕ್ಷಿಯಾಗಿದ್ದ ನಗರವಿಂದು ವಿಜೃಂಭಣೆಯ ಮಹಾಶಿವರಾತ್ರಿ ಧಾರ್ಮಿಕೋತ್ಸವಕ್ಕೆ ಸನ್ನದ್ಧವಾಗಿದೆ.
ನಗರದಲ್ಲಿ ಪ್ರತಿ ವರ್ಷದಂತೆ ಇಂದೂ ಮಹಾಶಿವರಾತ್ರಿ ಮಹೋತ್ಸವದ ವಿಶಿಷ್ಠ ಆಚರಣೆ ಜರುಗಲಿದೆ. ಕ್ಷಮತಾ ಸಂಸ್ಥೆ ಮತ್ತು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರು ಕ್ಷೇತ್ರದ ಭಕ್ತರಿಗೆ ಈ ಬಾರಿ ಹುಬ್ಬಳ್ಳಿಯಲ್ಲೇ ಶ್ರೀ ಕಾಶಿ ವಿಶ್ವನಾಥೇಶ್ವರ ದರ್ಶನಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

*ಕಾಶಿ ವಿಶ್ವನಾಥ ಮಾದರಿ ಶಿವಲಿಂಗ:* ಹುಬ್ಬಳ್ಳಿ ದೇಶಾಂಡೆ ನಗರದ ಜಿಮಖಾನಾ ಮೈದಾನದಲ್ಲಿ ಭಕ್ತರಿಗೆ ಶ್ರೀ ಕಾಶಿ ವಿಶ್ವನಾಥೇಶ್ವರ ಮಾದರಿ ಶಿವಲಿಂಗ ದರ್ಶನವಾಗಲಿದೆ. ಮಹಾ ಶಿವರಾತ್ರಿ ಪ್ರಯುಕ್ತ ಹನ್ನೆರೆಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕಾಶಿ ವಿಶ್ವನಾಥ ದೇವಸ್ಥಾನ ಮಾದರಿಯಲ್ಲೇ ಶಿವಲಿಂಗ ಪ್ರತಿಷ್ಠಾಪನೆಗೆ ಸಚಿವ ಪ್ರಲ್ಹಾದ ಜೋಶಿ ಸಾಥ್ ನೀಡಿದ್ದಾರೆ.
ಮಹಾಶಿವರಾತ್ರಿ ಮಹೋತ್ಸವ ಪ್ರಯುಕ್ತ ಬುಧವಾರವಿಡೀ ಒಂದರ ಮೇಲೊಂದು ಶಿವನಾರಾಧನೆ, ಭಕ್ತಿ ಸಮರ್ಪಣೆ ಕಾರ್ಯಕ್ರಮ ಜರುಗಲಿವೆ. ಬೆಳಗ್ಗೆ ಮಹಾದೇವನಿಗೆ ವಿಶೇಷ ಪೂಜೆ – ಪುನಸ್ಕಾರಗಳು ನೆರವೇರಿದರೆ, ಸಂಜೆ ಬಳಿಕ ಪ್ರಸಿದ್ಧ ಕಲಾವಿದರಿಂದ ಭಕ್ತಿಸುಧೆ ಹರಿಯಲಿದೆ.

*ಸಂಗೀತ ಸುಧೆಯೊಂದಿಗೆ ಶಿವನಾಮ ಸ್ಮರಣೆ:* ಪ್ರಸಿದ್ಧ ಗಾಯಕರು ಮತ್ತು ಕಲಾವಿದರುಗಳಿಂದ ಸಂಜೆ 6 ಗಂಟೆಗೆ “ಸಂಗೀತದೊಂದಿಗೆ ಶಿವನಾಮ ಸ್ಮರಣೆ” ಆರಂಭಗೊಳ್ಳಲಿದೆ. ವಿದುಷಿ ಸುಜಾತ ಗುರುವ್ ಅವರು ಹಿಂದೂಸ್ತಾನಿ ಮತ್ತು ಶಾಸ್ತ್ರೀಯ ಸಂಗೀತ ನುಡಿಸುವರು. ಹುಬ್ಬಳ್ಳಿಯ ಮಯೂರ ನೃತ್ಯ ಅಕಾಡೆಮಿಯ ಕಲಾವಿದರು “ಶಿವವಚನ ವಾಣಿ ನೃತ್ಯ” ಪ್ರದರ್ಶಿಸಲಿದ್ದಾರೆ.
ಈ ಶಿವನಾಮ ಸ್ಮರಣೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಕನ್ನಡದ ಖ್ಯಾತ ಗಾಯಕರಾದ ಚೇತನ ನಾಯಕ ಹಾಗೂ ಸಿಂಚನ ದೀಕ್ಷಿತ ಅವರಿಂದ ಸಂಗೀತ ಸಂಜೆ ಹಾಗೂ ಹುಬ್ಬಳ್ಳಿಯ ಬ್ಯಾಂಡ್ ಕಲ್ಕಿ ತಂಡದಿಂದ ಸಂಗೀತ ಸುಧೆ ಕಾರ್ಯಕ್ರಮ ಮಹಾಶಿವರಾತ್ರಿಯ ಈ ಮಹೋತ್ಸವಕ್ಕೆ ಮೆರುಗು ನೀಡಲಿದೆ.
ಹುಬ್ಬಳ್ಳಿ–ಧಾರವಾಡ ಅವಳಿ ನಗರ ಹಾಗೂ ಸುತ್ತಮುತ್ತಲಿನ ಶಿವ ಸದ್ಭಕ್ತರು ಮಹಾಶಿವರಾತ್ರಿ ಮಹೋತ್ಸವದ ಈ ಧಾರ್ಮಿಕ ಮಹೋತ್ಸವದಲ್ಲಿ ಭಾಗಿಯಾಗಿ ಮಹಾಶಿವನ ಕೃಪೆಗೆ ಪಾತ್ರರಾಗಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು