7:34 AM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

Missing | ಫರಂಗಿಪೇಟೆ: ಅಪ್ರಾಪ್ತ ವಯಸ್ಸಿನ ಪಿಯು ವಿದ್ಯಾರ್ಥಿ ನಾಪತ್ತೆ ಪ್ರಕರಣ: ಪೊಲೀಸ್ ಹೊರ ಠಾಣೆಗೆ ಗ್ರಾಮಸ್ಥರ ಮುತ್ತಿಗೆ

27/02/2025, 21:34

ಬಂಟ್ವಾಳ(reporterkarnataka.com): ಇಲ್ಲಿಗೆ ಸಮೀಪದ ಫರಂಗಿಪೇಟೆ ಬಳಿಯ ಕಿದೆಬೆಟ್ಟುವಿನ ಪಿಯುಸಿ ವಿದ್ಯಾರ್ಥಿ ನಾಪತ್ತೆಯಾದ ಪ್ರಕರಣ ಸಂಬಂಧಿಸಿದಂತೆ ಸ್ಥಳೀಯ ಗ್ರಾಮಸ್ಥರು ಪೊಲೀಸ್ ಹೊರ ಠಾಣೆಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆಯಲ್ಲಿರುವ ಪೊಲೀಸ್ ಹೊರ ಠಾಣೆಗೆ ಗುರುವಾರ ಬೆಳಿಗ್ಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಮುಂದಿನ‌ 24 ಗಂಟೆಯ ಒಳಗಾಗಿ ಬಾಲಕನನ್ನು ಪತ್ತೆ ಮಾಡಬೇಕು, ತಪ್ಪಿದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸುತ್ತೇವೆ, ಶನಿವಾರ ಫರಂಗಿಪೇಟೆ ಬಂದ್ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಅಡಿಷನಲ್ ಎಸ್ಪಿ ರಾಜೇಂದ್ರ ಅವರ ಜೊತೆ ಪ್ರತಿಭಟನಕಾರರು ಮಾತುಕತೆ ನಡೆಸಿದರು. ಬಳಿಕ ಫರಂಗಿಪೇಟೆಯ ಆಂಜನೇಯ ದೇವಸ್ಥಾನದಲ್ಲಿ ಗ್ರಾಮಸ್ಥರು ಸಭೆ ನಡೆಸಿ ಮಾ.1 ರಂದು ಶನಿವಾರ ಬೆಳಗ್ಗಿನಿಂದ ಫರಂಗಿಪೇಟೆಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಗೊಳಿಸಿ ಪ್ರತಿಭಟನೆ ಮಾಡಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.
ಈ ಸಂದರ್ಭ ಪ್ರಮುಖರಾದ ಉಮೇಶ್ ಶೆಟ್ಟಿ ಬರ್ಕೆ, ಪ್ರಸಾದ್ ಕುಮಾರ್, ಮನೋಜ್ ಆಚಾರ್ಯ ನಾಣ್ಯ, ಪದ್ಮನಾಭ ಶೆಟ್ಟಿ ಕಿದೆಬೆಟ್ಟು, ಧನರಾಜ್, ಚಂದ್ರಶೇಖರ ಗಾಂಭೀರ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರಿನ ಕಪಿತಾನಿಯೋ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ಅಪ್ರಾಪ್ತ ಬಾಲಕ ದಿಗಂತ್ ಫೆ.25ರಿಂದ ನಾಪತ್ತೆಯಾಗಿದ್ದಾನೆ. ಅಂದು
ಸಂಜೆ ಆಂಜನೇಯ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಬಳಿಕ ನಾಪತ್ತೆಯಾಗಿದ್ದ. ಹುಡುಕಾಟ ನಡೆಸಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ಮನೆ ಸಮೀಪದ ರೈಲ್ವೇ ಹಳಿಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು