4:42 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

SEZ | ಎಸ್‌ಇಝೆಡ್ ಅಧಿಕಾರಿಗಳ ಆದೇಶ ತುಳುನಾಡಿದ ನಂಬಿಕೆಗೆ ಅಪಮಾನ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

28/02/2025, 22:56

ಮಂಗಳೂರು(reporterkarnataka.com): ಇಲ್ಲಿಗೆ ಸಮೀಪದ ಬಜಪೆ ಗ್ರಾಮದ ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ಸ್ಥಾನಕ್ಕೆ ನಿತ್ಯ ಆರಾಧನೆಗೆ ಮುಂದಿನ ದಿನಗಳಿಂದ ಅವಕಾಶ ನಿರಾಕರಿಸುವ ಮೂಲಕ ಮಂಗಳೂರು ಎಸ್‌ಇಝೆಡ್ ತುಳುನಾಡಿನ ನಂಬಿಕೆ ಮೇಲೆ ಸವಾರಿ ಮಾಡಲು ಹೊರಟಿರುವುದು ವಿಷಾದನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದ್ದಾರೆ.
ಈ ದೈವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದ್ದು, ಇದೀಗ ದೈವಕ್ಕೆ ಹೂವು, ನೀರು ಇಡಲು ಬಿಡುವುದಿಲ್ಲವೆನ್ನುವ ಮೂಲಕ ಎಸ್‌ಇಝೆಡ್ ಅಧಿಕಾರಿಗಳು ನೀಡಿರುವ ಆದೇಶ ತುಳುನಾಡಿದ ನಂಬಿಕೆ ಮೇಲೆ ಮಾಡಿರುವ ಅಪಮಾನ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಅನಾಹುತ ಸಂಭವಿಸುವುದನ್ನೂ ದೈವ ದೇವರು ಕಾಪಾಡಿಕೊಂಡು ಬಂದಿರುವುದು ನಮಗೆಲ್ಲ ತಿಳಿದ ವಿಷಯ. ನಾವು ಯಾವುದೇ ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ ಅನಾದಿಕಾಲದಿಂದಲೂ ನಂಬಿಕೊಂಡು ಬಂದಿರುವ ದೈವಸ್ಥಾನಗಳಿಗೆ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಬೇಕಿರುವುದು ಅಧಿಕಾರಿಗಳ ಧರ್ಮ. ಅಭಿವೃದ್ಧಿಯ ನೆಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಕೂಡದು. ವಿಶೇಷ ಆರ್ಥಿಕ ವಲಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಸುಸೂತ್ರವಾಗಿ ನಡೆಯುಲು ದೈವದೇವರ ಅನುಗ್ರಹವೂ ಅಷ್ಟೇ ಮುಖ್ಯ. ಆದ್ದರಿಂದ ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ಸ್ಥಾನಕ್ಕೆ ಯಾವುದೇ ತೊಂದರೆಯಾಗದಂತೆ ಅಭಿವೃದ್ಧಿ ಕಾರ್ಯ ನಡೆಸಲಿ. ಸಂಸದರು, ಜಿಲ್ಲಾಧಿಕಾರಿಗಳು, ಎಸ್‌ಇಝೆಡ್ ಅಧಿಕಾರಿಗಳು, ಸಂಬಂಧಪಟ್ಟವರು ಕೂಡಲೇ ಒಳ್ಳೆಯ ನಿರ್ಧಾರಕ್ಕೆ ಕೈಗೊಳ್ಳುವಂತೆ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು