3:07 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

SEZ | ಎಸ್‌ಇಝೆಡ್ ಅಧಿಕಾರಿಗಳ ಆದೇಶ ತುಳುನಾಡಿದ ನಂಬಿಕೆಗೆ ಅಪಮಾನ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

28/02/2025, 22:56

ಮಂಗಳೂರು(reporterkarnataka.com): ಇಲ್ಲಿಗೆ ಸಮೀಪದ ಬಜಪೆ ಗ್ರಾಮದ ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ಸ್ಥಾನಕ್ಕೆ ನಿತ್ಯ ಆರಾಧನೆಗೆ ಮುಂದಿನ ದಿನಗಳಿಂದ ಅವಕಾಶ ನಿರಾಕರಿಸುವ ಮೂಲಕ ಮಂಗಳೂರು ಎಸ್‌ಇಝೆಡ್ ತುಳುನಾಡಿನ ನಂಬಿಕೆ ಮೇಲೆ ಸವಾರಿ ಮಾಡಲು ಹೊರಟಿರುವುದು ವಿಷಾದನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದ್ದಾರೆ.
ಈ ದೈವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದ್ದು, ಇದೀಗ ದೈವಕ್ಕೆ ಹೂವು, ನೀರು ಇಡಲು ಬಿಡುವುದಿಲ್ಲವೆನ್ನುವ ಮೂಲಕ ಎಸ್‌ಇಝೆಡ್ ಅಧಿಕಾರಿಗಳು ನೀಡಿರುವ ಆದೇಶ ತುಳುನಾಡಿದ ನಂಬಿಕೆ ಮೇಲೆ ಮಾಡಿರುವ ಅಪಮಾನ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಅನಾಹುತ ಸಂಭವಿಸುವುದನ್ನೂ ದೈವ ದೇವರು ಕಾಪಾಡಿಕೊಂಡು ಬಂದಿರುವುದು ನಮಗೆಲ್ಲ ತಿಳಿದ ವಿಷಯ. ನಾವು ಯಾವುದೇ ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ ಅನಾದಿಕಾಲದಿಂದಲೂ ನಂಬಿಕೊಂಡು ಬಂದಿರುವ ದೈವಸ್ಥಾನಗಳಿಗೆ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಬೇಕಿರುವುದು ಅಧಿಕಾರಿಗಳ ಧರ್ಮ. ಅಭಿವೃದ್ಧಿಯ ನೆಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಕೂಡದು. ವಿಶೇಷ ಆರ್ಥಿಕ ವಲಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಸುಸೂತ್ರವಾಗಿ ನಡೆಯುಲು ದೈವದೇವರ ಅನುಗ್ರಹವೂ ಅಷ್ಟೇ ಮುಖ್ಯ. ಆದ್ದರಿಂದ ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ಸ್ಥಾನಕ್ಕೆ ಯಾವುದೇ ತೊಂದರೆಯಾಗದಂತೆ ಅಭಿವೃದ್ಧಿ ಕಾರ್ಯ ನಡೆಸಲಿ. ಸಂಸದರು, ಜಿಲ್ಲಾಧಿಕಾರಿಗಳು, ಎಸ್‌ಇಝೆಡ್ ಅಧಿಕಾರಿಗಳು, ಸಂಬಂಧಪಟ್ಟವರು ಕೂಡಲೇ ಒಳ್ಳೆಯ ನಿರ್ಧಾರಕ್ಕೆ ಕೈಗೊಳ್ಳುವಂತೆ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು