5:13 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

Double Murder | ಬೆಂಗಳೂರು; ಇಬ್ಬರ ಕೊಲೆಗೈದ ಆರೋಪಿಗೆ 10 ವರ್ಷ ಶಿಕ್ಷೆ; 10 ಸಾವಿರ ದಂಡ

01/03/2025, 23:04

ಬೆಂಗಳೂರು (reporterkarnataka.com:
2020ರ ಅಕ್ಟೋಬರ್ 18 ರಂದು ಬೆಳಗಿನ 8 ಗಂಟೆಯ ಸುಮಾರಿನಲ್ಲಿ, ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ಸರಹದ್ದಿನ ಬಾಳೆ ಮಂಡಿಯೊಂದರಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದ ಆರೋಪಿ ಎಂ.ಗಣೇಶ್ ಮನೋಹರ್(40)ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ 67ನೇ ಸಿಸಿಹೆಚ್ ನ್ಯಾಯಾಲಯದ ಅಪರ ಜಿಲ್ಲಾ ನ್ಯಾಯಾಧೀಶರಾದ ಎ‌. ಜಯಪ್ರಕಾಶ್ ತೀರ್ಪು ನೀಡಿದ್ದಾರೆ.
2020ರ ಅಕ್ಟೋಬರ್ 18 ರಂದು ಯಾವುದೇ ಉದ್ದೇಶವಿಲ್ಲದೇ, ಏಕಾಏಕಿ ಉದ್ವೇಗಕ್ಕೆ ಒಳಗಾದ ಎಂ.ಗಣೇಶ್ ಮನೋಹರ್ ಎಂಬ ಆರೋಪಿಯು, ಕಾಟನ್‌ಪೇಟೆಯ ಬಾಳೆ ಮಂಡಿಯೊಂದರಲ್ಲಿ ಅಂಜನಪ್ಪ ಗಾರ್ಡನ್ ನಿವಾಸಿ ಮಾರಿ ಬಿನ್ ರಾಮಮೂರ್ತಿ(34) ಹಾಗೂ ಮೈಸೂರು ರಸ್ತೆ ಫ್ಲವರ್ ಗಾರ್ಡನ್ ನಿವಾಸಿ ರಾಜೇಶ್ ಬಿನ್ ರಾಮು ಎಂಬುವರಿಗೆ ಚಾಕುವಿನಿಂದ ಇರಿದಿದ್ದರು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದರು . ಇದೇ ಘಟನೆಯಲ್ಲಿ 4-5 ಜನರು ಗಾಯಗೊಂಡಿದ್ದರು. ಕಾಟನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಿ.ಎಸ್.ಪಾಟೀಲ್ ಅವರು ವಾದ ಮಂಡಿಸಿ ದಾಖಲೆಗಳು ಹಾಗೂ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 10 ವರ್ಷಗಳ ಶಿಕ್ಷೆ ವಿಧಿಸಿದೆ.
ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು