7:05 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

Double Murder | ಬೆಂಗಳೂರು; ಇಬ್ಬರ ಕೊಲೆಗೈದ ಆರೋಪಿಗೆ 10 ವರ್ಷ ಶಿಕ್ಷೆ; 10 ಸಾವಿರ ದಂಡ

01/03/2025, 23:04

ಬೆಂಗಳೂರು (reporterkarnataka.com:
2020ರ ಅಕ್ಟೋಬರ್ 18 ರಂದು ಬೆಳಗಿನ 8 ಗಂಟೆಯ ಸುಮಾರಿನಲ್ಲಿ, ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ಸರಹದ್ದಿನ ಬಾಳೆ ಮಂಡಿಯೊಂದರಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದ ಆರೋಪಿ ಎಂ.ಗಣೇಶ್ ಮನೋಹರ್(40)ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ 67ನೇ ಸಿಸಿಹೆಚ್ ನ್ಯಾಯಾಲಯದ ಅಪರ ಜಿಲ್ಲಾ ನ್ಯಾಯಾಧೀಶರಾದ ಎ‌. ಜಯಪ್ರಕಾಶ್ ತೀರ್ಪು ನೀಡಿದ್ದಾರೆ.
2020ರ ಅಕ್ಟೋಬರ್ 18 ರಂದು ಯಾವುದೇ ಉದ್ದೇಶವಿಲ್ಲದೇ, ಏಕಾಏಕಿ ಉದ್ವೇಗಕ್ಕೆ ಒಳಗಾದ ಎಂ.ಗಣೇಶ್ ಮನೋಹರ್ ಎಂಬ ಆರೋಪಿಯು, ಕಾಟನ್‌ಪೇಟೆಯ ಬಾಳೆ ಮಂಡಿಯೊಂದರಲ್ಲಿ ಅಂಜನಪ್ಪ ಗಾರ್ಡನ್ ನಿವಾಸಿ ಮಾರಿ ಬಿನ್ ರಾಮಮೂರ್ತಿ(34) ಹಾಗೂ ಮೈಸೂರು ರಸ್ತೆ ಫ್ಲವರ್ ಗಾರ್ಡನ್ ನಿವಾಸಿ ರಾಜೇಶ್ ಬಿನ್ ರಾಮು ಎಂಬುವರಿಗೆ ಚಾಕುವಿನಿಂದ ಇರಿದಿದ್ದರು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದರು . ಇದೇ ಘಟನೆಯಲ್ಲಿ 4-5 ಜನರು ಗಾಯಗೊಂಡಿದ್ದರು. ಕಾಟನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಿ.ಎಸ್.ಪಾಟೀಲ್ ಅವರು ವಾದ ಮಂಡಿಸಿ ದಾಖಲೆಗಳು ಹಾಗೂ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 10 ವರ್ಷಗಳ ಶಿಕ್ಷೆ ವಿಧಿಸಿದೆ.
ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು