5:25 PM Thursday26 - June 2025
ಬ್ರೇಕಿಂಗ್ ನ್ಯೂಸ್
BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್… ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಅತ್ಯಾಧುನಿಕ ಭೂಗತ ರಸ್ತೆ ಜಾಲ, ಪೆರಿಫೆರಲ್ ರಿಂಗ್ ರಸ್ತೆ: ಹೆದ್ದಾರಿ ಸಚಿವ… ಎನ್.ಆರ್.ಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು;… Chikkamagaluru | ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ: ಸವಾರ… ಬಾಣಸವಾಡಿ, ಕಸ್ತೂರಿನಗರ ಅರಣ್ಯ ಪ್ರದೇಶಕ್ಕೆ ಸಚಿವ ಖಂಡ್ರೆ ಭೇಟಿ: ಬೆಂಗಳೂರಿನಲ್ಲಿ ಶ್ವಾಸತಾಣಗಳ ಸಂರಕ್ಷಣೆ… HDK | ವಸತಿ ಇಲಾಖೆ ಅಕ್ರಮ ಮರೆಮಾಚಲು ಎಚ್.ಕೆ. ಪಾಟೀಲ್ ಪತ್ರ ತೇಲಿ… ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ 224 ಶಾಸಕರಿಗೂ ಗೊತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಚಾಲಕರ ವಿರುದ್ಧ ಕಠಿಣ ಕ್ರಮ: ಸಾರಿಗೆ ಸಚಿವ ರಾಮಲಿಂಗಾ… Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ತುಳು ಭಾಷೆ ತುಳು ಸಂಸ್ಕೃತಿಯ ಬಗ್ಗೆ ಎಲ್ಲರೂ ಒಲವು ಬೆಳೆಸಿಕೊಳ್ಳಿ: ಪ್ರೊ. ಕೃಷ್ಣಮೂರ್ತಿ

02/03/2025, 10:13

ಮಂಗಳೂರು (reporterkarnataka.com): ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಪರಿಷತ್ ಜಂಟಿ ಆಶ್ರಯದಲ್ಲಿ ನಡೆಯುವ ವಿದ್ಯಾರ್ಥಿ ತುಳು ಸಮ್ಮೇಳನದ ಪೂರ್ವಭಾವಿ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮ ತುಳು ಭವನದಲ್ಲಿ ಜರಗಿತು.
ಸುರತ್ಕಲ್ ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.
ಕೃಷ್ಣಮೂರ್ತಿ ಸುರತ್ಕಲ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ತುಳು ಭಾಷೆ ತುಳು ಸಂಸ್ಕøತಿಯ ಬಗ್ಗೆ ಎಲ್ಲರೂ ಒಲವು ಬೆಳೆಸಿಕೊಳ್ಳಬೇಕು, ಪದವಿ ಶಿಕ್ಷಣದಲ್ಲಿ ತುಳು ಪಠ್ಯ ಎಲ್ಲಾ ಕಾಲೇಜುಗಳಿಗೆ ವಿಸ್ತರಣೆಯಾಗಲು ಈ ವಿದ್ಯಾರ್ಥಿ ತುಳು ಸಮ್ಮೇಳನ ಸಹಕಾರಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಮಾತನಾಡಿ, ತುಳು ಭಾಷೆ ನಮ್ಮೆಲ್ಲರ ಮಾತೃ ಭಾಷೆಯಾಗಿದ್ದು, ಭಾಷೆಯ ಬಗ್ಗೆ ಅಭಿಮಾನ ಮೂಡಿಸಲು ಇಂತಹ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಹೇಳಿದರು.
ತುಳು ಪರಿಷತ್ ಗೌರವಾಧ್ಯಕ್ಷ ಡಾ. ಪ್ರಭಾಕರ್ ನೀರುಮಾರ್ಗ ಮಾತನಾಡಿ, ಪ್ರೌಢ ಶಾಲೆ ಹಾಗೂ ಪದವಿ, ಸ್ನಾತಕೋತ್ತರ ಪದವಿಯಲ್ಲಿ ತುಳು ಪಠ್ಯ ಜಾರಿಯಲ್ಲಿದೆ. ಪಿಯುಸಿ ತರಗತಿಯಲ್ಲೂ ತುಳು ಭಾಷೆಯನ್ನು ಅಳವಡಿಸಲು ಸರಕಾರ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ಶಾಲಿನಿ ರೈ, ಅಮಿತ , ರಾಕೇಶ್ ಕುಂದರ್, ರಮೇಶ್ ಮಂಚಕಲ್, ಚಂದ್ರಕಲಾ ರಾವ್ ಉಪಸ್ಥಿತರಿದ್ದರು.
ಎರಡನೇ ಹಂತದ ಈ ಸ್ಪರ್ಧಾ ಕೂಟದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ತುಳು ಭಾಷಣ ಸ್ಪರ್ಧೆ ಹಾಗೂ ತುಳು ಸಿನಿಮಾ ಗೀತೆಗಳ ಗಾಯನ ಸ್ಪರ್ಧೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು