5:46 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ತುಳು ಭಾಷೆ ತುಳು ಸಂಸ್ಕೃತಿಯ ಬಗ್ಗೆ ಎಲ್ಲರೂ ಒಲವು ಬೆಳೆಸಿಕೊಳ್ಳಿ: ಪ್ರೊ. ಕೃಷ್ಣಮೂರ್ತಿ

02/03/2025, 10:13

ಮಂಗಳೂರು (reporterkarnataka.com): ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಪರಿಷತ್ ಜಂಟಿ ಆಶ್ರಯದಲ್ಲಿ ನಡೆಯುವ ವಿದ್ಯಾರ್ಥಿ ತುಳು ಸಮ್ಮೇಳನದ ಪೂರ್ವಭಾವಿ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮ ತುಳು ಭವನದಲ್ಲಿ ಜರಗಿತು.
ಸುರತ್ಕಲ್ ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.
ಕೃಷ್ಣಮೂರ್ತಿ ಸುರತ್ಕಲ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ತುಳು ಭಾಷೆ ತುಳು ಸಂಸ್ಕøತಿಯ ಬಗ್ಗೆ ಎಲ್ಲರೂ ಒಲವು ಬೆಳೆಸಿಕೊಳ್ಳಬೇಕು, ಪದವಿ ಶಿಕ್ಷಣದಲ್ಲಿ ತುಳು ಪಠ್ಯ ಎಲ್ಲಾ ಕಾಲೇಜುಗಳಿಗೆ ವಿಸ್ತರಣೆಯಾಗಲು ಈ ವಿದ್ಯಾರ್ಥಿ ತುಳು ಸಮ್ಮೇಳನ ಸಹಕಾರಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಮಾತನಾಡಿ, ತುಳು ಭಾಷೆ ನಮ್ಮೆಲ್ಲರ ಮಾತೃ ಭಾಷೆಯಾಗಿದ್ದು, ಭಾಷೆಯ ಬಗ್ಗೆ ಅಭಿಮಾನ ಮೂಡಿಸಲು ಇಂತಹ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಹೇಳಿದರು.
ತುಳು ಪರಿಷತ್ ಗೌರವಾಧ್ಯಕ್ಷ ಡಾ. ಪ್ರಭಾಕರ್ ನೀರುಮಾರ್ಗ ಮಾತನಾಡಿ, ಪ್ರೌಢ ಶಾಲೆ ಹಾಗೂ ಪದವಿ, ಸ್ನಾತಕೋತ್ತರ ಪದವಿಯಲ್ಲಿ ತುಳು ಪಠ್ಯ ಜಾರಿಯಲ್ಲಿದೆ. ಪಿಯುಸಿ ತರಗತಿಯಲ್ಲೂ ತುಳು ಭಾಷೆಯನ್ನು ಅಳವಡಿಸಲು ಸರಕಾರ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ಶಾಲಿನಿ ರೈ, ಅಮಿತ , ರಾಕೇಶ್ ಕುಂದರ್, ರಮೇಶ್ ಮಂಚಕಲ್, ಚಂದ್ರಕಲಾ ರಾವ್ ಉಪಸ್ಥಿತರಿದ್ದರು.
ಎರಡನೇ ಹಂತದ ಈ ಸ್ಪರ್ಧಾ ಕೂಟದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ತುಳು ಭಾಷಣ ಸ್ಪರ್ಧೆ ಹಾಗೂ ತುಳು ಸಿನಿಮಾ ಗೀತೆಗಳ ಗಾಯನ ಸ್ಪರ್ಧೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು