6:27 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Water | ನಾರಾಯಣಪುರ ಕಾಲುವೆಗೆ ಏ.15ರವರೆಗೆ ನೀರು ಹರಿಸಲು ರೈತ ಸಂಘ ಮುಖಂಡರು ಒತ್ತಾಯ

02/03/2025, 16:45

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘ ಹುಣಸಗಿ ತಾಲೂಕು ಘಟಕದ ಪದಾಧಿಕಾರಿಗಳು ಶನಿವಾರ ಕೆಬಿಜೆಎನ್‌ಎಲ್ ಮುಖ್ಯ ಎಂಜಿನಿಯರ ಕಚೇರಿಗೆ ತೆರಳಿ ಹಿಂಗಾರು ಹಂಗಾಮಿನ ಬೆಳೆಗಳಿಗೆ ಏ.15ರವರೆಗೆ
ನಾರಾಯಣಪುರ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸಿಇ ಆರ್. ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು.
ರೈತ ಮುಖಂಡ ಹನುಮಗೌಡ ನಾರಾಯಣಪುರ, ಸಂಘಟನೆ ತಾಲೂಕು ಉಪಾಧ್ಯಕ್ಷ ಗದ್ದೆಪ್ಪನಾಗಬೇನಾಳ ಮಾತನಾಡಿ, ಕೃಷ್ಣಾ ಅಚ್ಚುಕಟ್ಟು ಭಾಗದ ರೈತರು ಕಾಲುವೆ ನೀರನ್ನೇ ನಂಬಿ ವಿವಿಧ ಬೆಳೆ ಬೆಳೆದಿದ್ದಾರೆ. ಪ್ರಸ್ತುತ ಬೆಳೆಗಳು ಸಮೃದ್ದವಾಗಿ ಬೆಳೆಯಲು ಮುಂದಿನ ಎರಡು ತಿಂಗಳವರೆಗೆ ನೀರಿನ ಅವಶ್ಯಕತೆ ಇದೆ. ಆಗ ಮಾತ್ರ ಬೆಳೆಗಳು ರೈತರ ಕೈಸೇರುತ್ತವೆ. ಇದನ್ನು ನೀರಾವರಿ ಅಧಿಕಾರಿಗಳು ಮನಗಂಡು ಏ.15ರವರೆಗೆ ಎಡ ಹಾಗೂ ಬಲದಂಡೆ ಮುಖ್ಯ ಕಾಲುವೆಗಳಿಗೆ ನೀರು ಹರಿಸಬೇಕು ಎಂದರು.
ನಿಗಮದ ಅಡಿಯಲ್ಲಿ ಈ ಹಿಂದೆ ಬಾಕಿ ಉಳಿದ ಕಾಮಗಾರಿ ಶೀಘ್ರವೇ ಕೈಗೆತ್ತಿಕೊಂಡು ಪೂರ್ಣಗೊಳಿಸುವಂತೆ ಮನವಿಯಲ್ಲಿ ವಿವರಿಸಲಾಗಿದೆ ಎಂದರು.

ಸಿಇ ಆರ್. ಮಂಜುನಾಥ ಮನವಿ ಸ್ವೀಕರಿಸಿ ಮಾತನಾಡಿ, ಮನವಿಯನ್ನು ಸರ್ಕಾರ, ಎಂಡಿ ಹಾಗೂ ಐಸಿಸಿ ಸಭೆಗೆ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಅಧೀಕ್ಷಕ ಅಭಿಯಂತರ ಆರ್.ಜಿ. ರಾಠೋಡ, ಸಂಘಟನೆ ಜಿಲ್ಲಾ ಉಪಾಧ್ಯಕ್ಷ ತಿಪ್ಪಣ್ಣ ಜಂಪಾ, ನಿಂಗನಗೌಡ ಗುಳಬಾಳ, ಮೈಬೂಬ ಅಂಗಡಿ ಸೇರಿದಂತೆ ಗುಳಬಾಳ, ಕಕ್ಕೇರಾ, ನಾರಾಯಣಪುರ, ಮೇಲಿನಗಡ್ಡಿ, ದೇವರಗಡ್ಡಿ ಗ್ರಾಮಗಳ ರೈತರು, ರೈತ ಸಂಘದ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು