7:17 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Go Green | ಹಸಿರು ಫೌಂಡೇಶನ್ ಹಾಗೂ ಪರಿಸರ ಪ್ರೇಮಿಗಳಿಂದ ಸ್ವಚ್ಛತಾ ಅಭಿಯಾನ

03/03/2025, 15:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಹಸಿರು ಫೌಂಡೇಶನ್ (ರಿ) ವತಿಯಿಂದ ಮಾರ್ಚ್ 3, 2025 ಸೋಮವಾರ ಬೆಳಗ್ಗೆ 10.30ಕ್ಕೆ ಬಣಕಲ್ ಪೊಲೀಸ್ ಠಾಣೆ ಸರ್ಕಲ್ ನಿಂದ ಚಾರ್ಮಾಡಿ ವರೆಗೆ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಈ ಮಹತ್ವಾಕಾಂಕ್ಷಿ ಪರಿಸರ ಅಭಿಯಾನದಲ್ಲಿ 250ಕ್ಕೂ ಹೆಚ್ಚು ಸ್ವಯಂ ಸೇವಕರು ಭಾಗವಹಿಸಲಿದ್ದು, ಬಣಕಲ್ ಭಾಗದ ಸಾರ್ವಜನಿಕರು ಹಾಗೂ ಎಲ್ಲಾ ಪರಿಸರ ಪ್ರೇಮಿಗಳು ಈ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಫೌಂಡೇಶನ್ ಅಧ್ಯಕ್ಷ ರತನ್ ಊರುಬಗೆ ಮನವಿ ಮಾಡಿದ್ದಾರೆ.
ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುವ ಸ್ವಯಂ ಸೇವಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ, ಅವರ ಆರೋಗ್ಯದ ಹಿತದೃಷ್ಟಿಯಿಂದ ಹ್ಯಾಂಡ್‌ಗ್ಲೌಸ್, ಮಾಸ್ಕ್ ವಿತರಣೆ ಹಾಗೂ ತುರ್ತು ವೈದ್ಯಕೀಯ ಸೇವೆಗಾಗಿ ತುರ್ತು ಚಿಕಿತ್ಸಾ ವಾಹನವನ್ನು ನಿಯೋಜಿಸಲಾಗಿದೆ.
ಪರಿಸರ ಸಂರಕ್ಷಣೆಗೆ ಇಂತಹ ಕಾರ್ಯಕ್ರಮಗಳು ಮಹತ್ವವನ್ನು ಹೊಂದಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಹಸಿರು ಫೌಂಡೇಶನ್ ತಂಡ ಕರೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು