3:20 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

Go Green | ಹಸಿರು ಫೌಂಡೇಶನ್ ಹಾಗೂ ಪರಿಸರ ಪ್ರೇಮಿಗಳಿಂದ ಸ್ವಚ್ಛತಾ ಅಭಿಯಾನ

03/03/2025, 15:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಹಸಿರು ಫೌಂಡೇಶನ್ (ರಿ) ವತಿಯಿಂದ ಮಾರ್ಚ್ 3, 2025 ಸೋಮವಾರ ಬೆಳಗ್ಗೆ 10.30ಕ್ಕೆ ಬಣಕಲ್ ಪೊಲೀಸ್ ಠಾಣೆ ಸರ್ಕಲ್ ನಿಂದ ಚಾರ್ಮಾಡಿ ವರೆಗೆ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಈ ಮಹತ್ವಾಕಾಂಕ್ಷಿ ಪರಿಸರ ಅಭಿಯಾನದಲ್ಲಿ 250ಕ್ಕೂ ಹೆಚ್ಚು ಸ್ವಯಂ ಸೇವಕರು ಭಾಗವಹಿಸಲಿದ್ದು, ಬಣಕಲ್ ಭಾಗದ ಸಾರ್ವಜನಿಕರು ಹಾಗೂ ಎಲ್ಲಾ ಪರಿಸರ ಪ್ರೇಮಿಗಳು ಈ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಫೌಂಡೇಶನ್ ಅಧ್ಯಕ್ಷ ರತನ್ ಊರುಬಗೆ ಮನವಿ ಮಾಡಿದ್ದಾರೆ.
ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುವ ಸ್ವಯಂ ಸೇವಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ, ಅವರ ಆರೋಗ್ಯದ ಹಿತದೃಷ್ಟಿಯಿಂದ ಹ್ಯಾಂಡ್‌ಗ್ಲೌಸ್, ಮಾಸ್ಕ್ ವಿತರಣೆ ಹಾಗೂ ತುರ್ತು ವೈದ್ಯಕೀಯ ಸೇವೆಗಾಗಿ ತುರ್ತು ಚಿಕಿತ್ಸಾ ವಾಹನವನ್ನು ನಿಯೋಜಿಸಲಾಗಿದೆ.
ಪರಿಸರ ಸಂರಕ್ಷಣೆಗೆ ಇಂತಹ ಕಾರ್ಯಕ್ರಮಗಳು ಮಹತ್ವವನ್ನು ಹೊಂದಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಹಸಿರು ಫೌಂಡೇಶನ್ ತಂಡ ಕರೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು