3:16 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

Go Green | ಹಸಿರು ಫೌಂಡೇಶನ್ ಹಾಗೂ ಪರಿಸರ ಪ್ರೇಮಿಗಳಿಂದ ಸ್ವಚ್ಛತಾ ಅಭಿಯಾನ

03/03/2025, 15:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಹಸಿರು ಫೌಂಡೇಶನ್ (ರಿ) ವತಿಯಿಂದ ಮಾರ್ಚ್ 3, 2025 ಸೋಮವಾರ ಬೆಳಗ್ಗೆ 10.30ಕ್ಕೆ ಬಣಕಲ್ ಪೊಲೀಸ್ ಠಾಣೆ ಸರ್ಕಲ್ ನಿಂದ ಚಾರ್ಮಾಡಿ ವರೆಗೆ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಈ ಮಹತ್ವಾಕಾಂಕ್ಷಿ ಪರಿಸರ ಅಭಿಯಾನದಲ್ಲಿ 250ಕ್ಕೂ ಹೆಚ್ಚು ಸ್ವಯಂ ಸೇವಕರು ಭಾಗವಹಿಸಲಿದ್ದು, ಬಣಕಲ್ ಭಾಗದ ಸಾರ್ವಜನಿಕರು ಹಾಗೂ ಎಲ್ಲಾ ಪರಿಸರ ಪ್ರೇಮಿಗಳು ಈ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಫೌಂಡೇಶನ್ ಅಧ್ಯಕ್ಷ ರತನ್ ಊರುಬಗೆ ಮನವಿ ಮಾಡಿದ್ದಾರೆ.
ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುವ ಸ್ವಯಂ ಸೇವಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ, ಅವರ ಆರೋಗ್ಯದ ಹಿತದೃಷ್ಟಿಯಿಂದ ಹ್ಯಾಂಡ್‌ಗ್ಲೌಸ್, ಮಾಸ್ಕ್ ವಿತರಣೆ ಹಾಗೂ ತುರ್ತು ವೈದ್ಯಕೀಯ ಸೇವೆಗಾಗಿ ತುರ್ತು ಚಿಕಿತ್ಸಾ ವಾಹನವನ್ನು ನಿಯೋಜಿಸಲಾಗಿದೆ.
ಪರಿಸರ ಸಂರಕ್ಷಣೆಗೆ ಇಂತಹ ಕಾರ್ಯಕ್ರಮಗಳು ಮಹತ್ವವನ್ನು ಹೊಂದಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಹಸಿರು ಫೌಂಡೇಶನ್ ತಂಡ ಕರೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು