3:08 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

Governor Speech | ಜಂಟೀ ಅಧಿವೇಶನದಲ್ಲಿ ಭಾಷಣ: ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಶೇ.99 ಅಂಕ ನೀಡಿದ ರಾಜ್ಯಪಾಲರು

03/03/2025, 15:30

ಬೆಂಗಳೂರು(reporterkarnataka.com): ಸಂವಿಧಾನ ಮುಖ್ಯಸ್ಥರೂ ಆಗಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ರಾಜ್ಯದ ಸರ್ಕಾರದ ಸಾಧನೆಗಳನ್ನು ಹಾಗೂ ಅಭಿವೃದ್ಧಿ ಕಾರ್ಯದ ಮುನ್ನೋಟವನ್ನು ಬಹಳ ಸಂತೋಷ ವ್ಯಕ್ತಪಡಿಸಿದ್ದಾರೆ.


ನಮ್ಮ ಸರ್ಕಾರ ಕಳೆದ ಆಯವ್ಯಯದಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಕೃಷಿ, ಹೈನುಗಾರಿಕೆ, ನೀರಾವರಿ, ಬೆಂಗಳೂರು ನಗರಾಭಿವೃದ್ಧಿ, ವಸತಿ, ಬಂಡವಾಳ ಹೂಡಿಕೆ, ರೇಷ್ಮೆ, ಮೂಲಭೂತ ಸೌಕರ್ಯ, ಶಿಕ್ಷಣ ಸೇರಿದಂತೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ ಬಗ್ಗೆ ಶ್ಲಾಘಿಸಿದ್ದಾರೆ. ಅಲ್ಲದೆ, ನಮ್ಮ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮತ್ತು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ಅವರು ಘೋಷಣೆ ಮಾಡಿದ್ದ 334 ಭರವಸೆಗಳಲ್ಲಿ 331 ಭರವಸೆಗಳನ್ನು ಜಾರಿ ಮಾಡಿ ಜನಕಲ್ಯಾಣಕ್ಕೆ ಕಾಂಗ್ರೆಸ್‌ ಸರ್ಕಾರ ನೆರವಾಗಿದೆ. ಶೇ.99. ಅಂಕಗಳನ್ನು ರಾಜ್ಯಪಾಲರು ನೀಡಿದ್ದಾರೆ. ನಮ್ಮ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿರುವಂಥ 117 ವಿಷಯಗಳನ್ನು ಸದನ ಮತ್ತು ರಾಜ್ಯದ ಜನತೆಯ ಮಧ್ಯೆ ಮಂಡಿಸಿರುವುದನ್ನು ವಿರೋಧ ಪಕ್ಷದ ನಾಯಕರು ಕೂಲಂಕಷವಾಗಿ ಓದಬೇಕು. ಅದನ್ನು ಬಿಟ್ಟು ಟೀಕೆ ಮಾಡಬೇಕೆಂದೇ ಟೀಕೆ ಮಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್‌ ಗೂಳಿಗೌಡ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು