11:35 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

Governor Speech | ಜಂಟೀ ಅಧಿವೇಶನದಲ್ಲಿ ಭಾಷಣ: ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಶೇ.99 ಅಂಕ ನೀಡಿದ ರಾಜ್ಯಪಾಲರು

03/03/2025, 15:30

ಬೆಂಗಳೂರು(reporterkarnataka.com): ಸಂವಿಧಾನ ಮುಖ್ಯಸ್ಥರೂ ಆಗಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ರಾಜ್ಯದ ಸರ್ಕಾರದ ಸಾಧನೆಗಳನ್ನು ಹಾಗೂ ಅಭಿವೃದ್ಧಿ ಕಾರ್ಯದ ಮುನ್ನೋಟವನ್ನು ಬಹಳ ಸಂತೋಷ ವ್ಯಕ್ತಪಡಿಸಿದ್ದಾರೆ.


ನಮ್ಮ ಸರ್ಕಾರ ಕಳೆದ ಆಯವ್ಯಯದಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಕೃಷಿ, ಹೈನುಗಾರಿಕೆ, ನೀರಾವರಿ, ಬೆಂಗಳೂರು ನಗರಾಭಿವೃದ್ಧಿ, ವಸತಿ, ಬಂಡವಾಳ ಹೂಡಿಕೆ, ರೇಷ್ಮೆ, ಮೂಲಭೂತ ಸೌಕರ್ಯ, ಶಿಕ್ಷಣ ಸೇರಿದಂತೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ ಬಗ್ಗೆ ಶ್ಲಾಘಿಸಿದ್ದಾರೆ. ಅಲ್ಲದೆ, ನಮ್ಮ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮತ್ತು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ಅವರು ಘೋಷಣೆ ಮಾಡಿದ್ದ 334 ಭರವಸೆಗಳಲ್ಲಿ 331 ಭರವಸೆಗಳನ್ನು ಜಾರಿ ಮಾಡಿ ಜನಕಲ್ಯಾಣಕ್ಕೆ ಕಾಂಗ್ರೆಸ್‌ ಸರ್ಕಾರ ನೆರವಾಗಿದೆ. ಶೇ.99. ಅಂಕಗಳನ್ನು ರಾಜ್ಯಪಾಲರು ನೀಡಿದ್ದಾರೆ. ನಮ್ಮ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿರುವಂಥ 117 ವಿಷಯಗಳನ್ನು ಸದನ ಮತ್ತು ರಾಜ್ಯದ ಜನತೆಯ ಮಧ್ಯೆ ಮಂಡಿಸಿರುವುದನ್ನು ವಿರೋಧ ಪಕ್ಷದ ನಾಯಕರು ಕೂಲಂಕಷವಾಗಿ ಓದಬೇಕು. ಅದನ್ನು ಬಿಟ್ಟು ಟೀಕೆ ಮಾಡಬೇಕೆಂದೇ ಟೀಕೆ ಮಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್‌ ಗೂಳಿಗೌಡ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು